ಬೆಂಗ್ಳೂರಿಗೆ ಇಂದು ಭಾರೀ ಮಳೆ ಮುನ್ಸೂಚನೆ..!

By Kannadaprabha NewsFirst Published Jun 4, 2024, 9:06 AM IST
Highlights

ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ, ಬಿಡಬ್ಲುಎಸ್‌ಎಸ್‌ಬಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಪೊಲೀಸರು, ಅಗ್ನಿಶಾಮಕದಳ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಯಾವ ಇಲಾಖೆಯೂ ಜವಾಬ್ದಾರಿಯಿಂದ ನುಣುಚಿಕೊಳ್ಳದೆ ಎಲ್ಲರೂ ಒಟ್ಟಾಗಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು(ಜೂ.04):  ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿಗೆ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹಾಗಾಗಿ ಬಿಬಿಎಂಪಿ, ಬೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖಾ ಅಧಿಖಾರಿಗಳು ಸಮನ್ವಯದಿಂದ 24/7 ಒಟ್ಟಾಗಿ ಕೆಲಸ ಮಾಡಬೇಕು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ವಿಧಾನಸೌಧದಲ್ಲಿ ಅಧಿಕಾರಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ, ಬಿಡಬ್ಲುಎಸ್‌ಎಸ್‌ಬಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಪೊಲೀಸರು, ಅಗ್ನಿಶಾಮಕದಳ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಯಾವ ಇಲಾಖೆಯೂ ಜವಾಬ್ದಾರಿಯಿಂದ ನುಣುಚಿಕೊಳ್ಳದೆ ಎಲ್ಲರೂ ಒಟ್ಟಾಗಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

Latest Videos

133 ವರ್ಷಗಳ ಹಿಂದಿನ ದಾಖಲೆ ಮುರಿದ ಒಂದೇ ದಿನದ ಬೆಂಗಳೂರು ಮಳೆ, ಸಹಾಯವಾಣಿ ತೆರೆದ ಬಿಬಿಎಂಪಿ!

ಪ್ರಮುಖವಾಗಿ ಬಿಬಿಎಂಪಿಯವರು ಮಸ್ಥಿತಿ ಅಥವಾ ಕುಸಿಯುವ ಹಂತದಲ್ಲಿರುವ ಯಾವುದೇ ಮನೆ, ಇತರೆ ಕಟ್ಟಡಗಳಲ್ಲಿ ವಾಸವಿರುವವರಿಗೆ ನೋಟಿಸ್ ನೋಡಿ ಸ್ಥಳಾಂತರಿಸುವ ಕೆಲಸ ಮಾಡಬೇಕು. ಈಗ ಬಿದ್ದಿರುವ ಮೆರಗಳ ಜೊತೆಗೆ ಬೀಳಬಹುದಾದ ಮರಗಳ ಬಗ್ಗೆ ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ಸಮೀಕ್ಷೆ ನಡೆಸಿ ತೆರವುಗೊಳಿಸುವ ಕೆಲಸ ಮಾಡಬೇಕು.

ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗದಂತೆ ಕ್ರಮ ವಹಿಸಬೇಕು. ಒಂದು ವೇಳೆ ನೂರು ನುಗ್ಗಿದರೆ ಉತ್ತಮ ಸಾಮರ್ಥದ ಪಂಪ್ ಸೆಟ್, ಜನರೇಟರ್‌ಗಳು ಹಾಗೂ ಹೆಚ್ಚು ನೀರು ಹರಿಯುವ ರಾಜಕಾಲುವೆ ಬಳಿ ಜೆಸಿಬಿ, ಟಿಪ್ಪರ್ ಗಳನ್ನು ಮುನ್ನೆಚರಿಕೆ ಕ್ರಮವಾಗಿಸಿದ್ದಮಾಡಿಕೊಂಡಿರಬೇಕು. ಎನ್‌ಡಿಆ‌ರ್.ಎಫ್ ತಂಡದೊಂದಿಗೂ ಸಂಪರ್ಕದಲ್ಲಿ ಇರಬೇಕೆಂದು ಸೂಚನೆ ನೀಡಲಾಗಿದೆ ಎಂದರು. 

ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

'ಕಾರ್ಪೊರೇಟರ್‌ಗಳು ಏನ್ ಮಾಡ್ತಾರೀ?'

ಬಿಬಿಎಂಪಿಗೆ ಚುನಾವಣೆ ನಡೆಯದೆ ಸ್ಥಳೀಯ ಜನಪ್ರತಿನಿಧಿಗಳಿಲ್ಲದೆ ಮಳೆ ಹಾನಿ ನಿಭಾಯಿಸುವ ಸಂಪೂರ್ಣ ಜವಾಬ್ದಾರಿ ಅಧಿಕಾರಿಗಳ ಮೇಲೆ ಬಿದ್ದಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ.ಶಿವಕುಮಾರ್, 'ಕಾರ್ಪೊರೇಟರ್‌ಗಳು ಏನು ಮಾಡ್ತಾ ಅಧಿಕಾರಿ ಇರಲಿ, ಇಲ್ಲದಿರಲಿ ಸಾರ್ವನಿಕ ಜೀವನದಲ್ಲಿರುವವರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು' ಎಂದರು. ಪ್ರಜಾಪ್ರಭುತ್ವದಲ್ಲಿ ಪಂಚಾಯಿತಿಯಿಂದ ಸಂಸತ್‌ವರೆಗೂ ಜನಪ್ರತಿನಿಧಿಗಳು ಇರಬೇಕು. ಆದರೆ, ಬಿಬಿಎಂಪಿ ಚುನಾವಣೆ ತಡವಾಗಿದೆ. ಈಗ ಲೋಕಸಭಾ ಚುನಾವಣೆ ಮುಗಿದಿದೆ. ಮುಂದೆ ಪಾಲಿಕೆ ಚುನಾವಣೆ ಬಗ್ಗೆ ಯೋಚಿಸೋಣ ಎಂದರು. ಬಿಬಿಎಂಪಿ ಮೇಲೆ ಒತ್ತಡ ಆಗಿರುವ ಕಾರಣ ವಿಭಜನೆ ಮಾಡುವ ಯೋಚನೆ ಇದೆಯೇ ಎಂದಾಗ 'ಲೋಕಸಭೆ ಫಲಿತಾಂಶ ಬರಲಿ. ನಂತರ ಶುಭ ಮುಹೂರ್ತ ನೀಡೋಣ' ಎಂದು ಹೇಳಿದರು. 

69400 525 ದೂರುಗಳಿಗೆ ಪರಿಹಾರ

ಭಾನುವಾರ ಸುರಿದ ಮಳೆಯಿಂದ ಮರ, ರೆಂಬೆ ಕೊಂಬೆ, ವಿದ್ಯುತ್ ಕಂಬ ಧರೆಗುರುಳಿರುವುದು, ಮನೆಗಳಿಗೆ ನೀರು ನುಗ್ಗಿರುವುದು ಸೇರಿದಂತೆ ಕಂಟ್ರೋಲ್ ರೂಂ ಸಂಖ್ಯೆ 1533ಗೆ ಒಟ್ಟು 694 ದೂರುಗಳು ಬಂದಿದ್ದವು. ಈ ಪೈಕಿ 525 ದೂರುಗಳನ್ನು ಪರಿಹರಿ ಸಲಾಗಿದೆ. 169 ದೂರುಗಳನ್ನು ಪರಿ ಹರಿಸುವ ಕೆಲಸ ನಡೆಯುತ್ತಿದೆ ಎಂದರು. ಜೂನ್ ನಲ್ಲಿ ಉತ್ತಮ ಮಳೆ ಬಿದ್ದಿರುವುದನ್ನು ನಗರದ ನಾಗರಿಕರು ಸಂತೋಷದಿಂದ ಸ್ವೀಕರಿಸಿದ್ದಾರೆ. ನನಗೂ ಸಾಕಷ್ಟು ಸಂತೋಷವಾಗಿದೆ. ಆದರೆ, ಮಳೆಯಿಂದ 265 ಮರಗಳು ಬಿದ್ದಿವೆ. ಇದರಲ್ಲಿ 96 ಮರಗಳನ್ನು 3. 365 ໕໑໐໖ ಗಳು ಬಿದ್ದಿದ್ದವು. ಎಲ್ಲವನ್ನು ತೆರವು ಗೊಳಿಸಲಾಗಿದೆ. 261 ವಿದ್ಯುತ್ ಕಂಬ ಗಳು ಬಿದ್ದಿದ್ದವು. ಇದನ್ನು ಸರಿಪಡಿಸಲಾ ಗುತ್ತಿದೆ. ಒಂದಷ್ಟು ವಾಹನಗಳು ಜಖಂ ಗೊಂಡಿವೆ. ಇದು ಬಿಟ್ಟರೆ ಯಾವುದೇ ಜೀವಹಾನಿಯಾ ಗಿಲ್ಲ ಎಂದರು. ಮಳೆ ಬಿದ್ದಾಗ ರಸ್ತೆಗುಂಡಿಗಳನ್ನು ಮುಚ್ಚಿದರೆ ಮತ್ತೆ ಕಿತ್ತು ಹೋಗುವ ಸಾಧ್ಯತೆ ಇರುವ ಕಾರಣ ಈ ಕೆಲಸ ತಡವಾಗಬಹುದು. ಇದೊಂದು ವಿಚಾರ ಹೊರತಾಗಿ ಮಿಕ್ಕ ವಿಚಾರಗಳಲ್ಲಿ ಅಧಿಕಾರಿಗಳು ಸಾಕಷ್ಟು ಎಚ್ಚರಿಕೆ ವಹಿಸಬೇಕು ನಿರ್ದೇಶಿಸಲಾ ಗಿದೆ ಎಂದರು. 

click me!