ಮದ್ಯ ಸೇವನೆ ಆರೋಗ್ಯಕ್ಕೆ ಹಾನಿ ಎಂದೇ ಮದುವೆಯಲ್ಲಿ ಎಣ್ಣೆ ಪಾರ್ಟಿ

Published : Jun 19, 2019, 02:17 PM ISTUpdated : Jun 19, 2019, 03:36 PM IST
ಮದ್ಯ ಸೇವನೆ ಆರೋಗ್ಯಕ್ಕೆ ಹಾನಿ ಎಂದೇ ಮದುವೆಯಲ್ಲಿ ಎಣ್ಣೆ ಪಾರ್ಟಿ

ಸಾರಾಂಶ

ಕೋಟೆನಾಡಿನಲ್ಲೊಂದು‌ ವಿಚಿತ್ರ ಕೊಡುಗೆ| ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ| ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಮದುವೆ|

ಚಿತ್ರದುರ್ಗ[ಜೂ.19]: ಕೋಟೆನಾಡಿನ ಮದುವೆ ಆಹ್ವಾನ ಪತ್ರಿಕೆಯೊಂದು ಭಾರೀ ಸೌಂಡ್ ಮಾಡುತ್ತಿದೆ.  ಮದುವೆಗೆ ಬರುವ ಅತಿಥಿಗಳಿಗೆ ಉಚಿತ ಎಣ್ಣೆ ವ್ಯವಸ್ಥೆ ಕಲ್ಪಿಸಿರುವುದೇ ಇದಕ್ಕೆ ಕಾರಣವಾಗಿದೆ. 

ಹೌದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ವೆಂಕಟೇಶ್-ದಿವ್ಯಾ ಮದುವೆಗೆ ತೆರಳುವವರಿಗೆ ಈ ಕೊಡುಗೆ ನೀಡಲಾಗುತ್ತದೆ. ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಎಣ್ಣೆ ಬಾಟಲ್ ಚಿತ್ರದ ಸಮೇತ ಮುದ್ರಣ ಮಾಡಲಾಗಿದೆ. 

ಮದುವೆಗೆ ಆಗಮಿಸುವ ಅತಿಥಿಗಳಿಗೆ ರಾತ್ರಿ 8 ಗಂಟೆಯಿಂದ ಉಚಿತ ಎಣ್ಣೆ ವ್ಯವಸ್ಥೆ ಅರೇಂಜ್ ಮಾಡುವ ಮೂಲಕ ಅತಿಥಿಗಳನ್ನು ತೃಪ್ತಿ ಪಡಿಸುವುದು ಮದುಮಗನ ಚಿಂತನೆಯಾಗಿದೆ. ಬಂದವರಿಗೆ ಎಣ್ಣೆ ವ್ಯವಸ್ಥೆ ಮಾಡಲು ಆಹ್ವಾನ ಪತ್ರಿಕೆಯಲ್ಲಿ ಪ್ರತ್ಯೇಕ ವ್ಯಕ್ತಿಯ ಹೆಸರನ್ನೂ ಮುದ್ರಣ ಮಾಡಲಾಗಿದೆ. 

ಅತಿಥಿಗಳಿಗೆ ಫ್ರೀ ಎಣ್ಣೆ ವ್ಯವಸ್ಥೆ ಕಲ್ಪಿಸಿದ್ದರೂ, ಆಹ್ವಾನ ಪತ್ರಿಕೆಯ ಮೂಲೆಯೊಂದರಲ್ಲಿ 'ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ' ಎಂಬ ಸಾಲುಗಳನ್ನು ಪ್ರಿಂಟ್ ಮಾಡಲು ಮರೆತಿಲ್ಲ. 

PREV
click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!