ಎರಡು ದಿನ ಮದ್ಯ ಮಾರಾಟ ಬಂದ್ : ಜಿಲ್ಲಾಧಿಕಾರಿ ಆದೇಶ

By Kannadaprabha NewsFirst Published Sep 14, 2019, 12:59 PM IST
Highlights

ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಗಣೇಶ ಉತ್ಸವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. 

ತುಮಕೂರು(ಸೆ.14) : ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ರೀತಿಯ ಗಲಾಟೆಗಳು ಆಗದಂತೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಶಿರಾ ನಗರದಲ್ಲಿ ಸೆ.15ರಂದು ನಡೆಯಲಿರುವ ಗಣಪತಿ ಮೂರ್ತಿಗಳ ವಿಸರ್ಜನಾ ಮಹೋತ್ಸವದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ನಗರದ 5 ಕಿಮೀ ವ್ಯಾಪ್ತಿಯಲ್ಲಿ ಒಣ ದಿನವೆಂದು ಘೋಷಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಡಿಸಿ ಡಾ.ಕೆ.ರಾಕೇಶ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಸೆ.14ರ ಸಂಜೆ 6 ರಿಂದ ಸೆ.16ರ ಬೆ. 6ರವರೆಗೆ ಜಾರಿಯಲ್ಲಿರುತ್ತದೆ.

click me!