ಮದ್ಯ ಮಾರಾಟ-ಪ್ರಾಣಿ ವಧೆ ನಿಷೇಧ : ಜಿಲ್ಲಾಧಿಕಾರಿ ಆದೇಶ

Published : Jan 14, 2020, 12:40 PM ISTUpdated : Jan 14, 2020, 12:43 PM IST
ಮದ್ಯ  ಮಾರಾಟ-ಪ್ರಾಣಿ ವಧೆ ನಿಷೇಧ : ಜಿಲ್ಲಾಧಿಕಾರಿ ಆದೇಶ

ಸಾರಾಂಶ

ಮದ್ಯ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

ಶಿವಮೊಗ್ಗ [ಜ.14]: ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದಲ್ಲಿ ಇರುವ ಪ್ರಸಿದ್ಧ ಅಯ್ಯಪ್ಪ ಸ್ವಾಮಿ  ದೇಗುಲದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಅದ್ದೂರಿ ಜಾತ್ರಾ ಮಹೋತ್ಸವ ನಡೆಯಲಿದೆ. 

ಪ್ರತೀ ವರ್ಷವೂ ಕೂಡ ಇಲ್ಲಿರುವ ಅಯ್ಯಪ್ಪ ಸ್ವಾಮೀ ದೇಗುಲದಲ್ಲಿ ಸಾವಿರಾರು ಭಕ್ತರು ಸೇರಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುತ್ತಾರೆ. 

ಈ ಬಾರಿಯೂ ಇಲ್ಲಿ ಅಯ್ಯಪ್ಪ ಸ್ವಾಮಿ ಧಾರ್ಮಿಕ ಉತ್ಸವ ನಡೆಯಲಿದ್ದು,  ಇದರ ಅಂಗವಾಗಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಇಂದು ರಾತ್ರಿ 10ರವರೆಗೆ ಮದ್ಯ  ಮಾರಾಟ ಹಾಗೂ ಪ್ರಾಣಿವಧೆ ನಿಷೇಧಿಸಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

PREV
click me!

Recommended Stories

ಅಡೋಬ್‌ನ ಮುಂದಿನ ಸಿಇಒ ಆಗಲಿರುವ ಬೆಂಗಳೂರಿನ ಬಸವನಗುಡಿಯ ಅನಿಲ್‌
ತಹಸೀಲ್ದಾರ್ ಅವಮಾನಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ನಡೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ!