ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಹು ಖ್ಯಾತಿಯ ಸಾಹಿತಿ ಖಾಸಿಂಸಾಬ್ ಇನ್ನಿಲ್ಲ

Published : Sep 04, 2022, 09:01 AM IST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಹು ಖ್ಯಾತಿಯ ಸಾಹಿತಿ  ಖಾಸಿಂಸಾಬ್ ಇನ್ನಿಲ್ಲ

ಸಾರಾಂಶ

ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಖಾಸಿಂಸಾಬ್ ಹುಸೇನಸಾಬ್ ಇನ್ನಿಲ್ಲ.   

ವಿಜಯಪುರ, (ಸೆಪ್ಟೆಂಬರ್.04): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಖಾಸಿಂಸಾಬ್ ಹುಸೇನಸಾಬ್ ಬಿಜಾಪುರ(88) ನಿಧನರಾಗಿದ್ದಾರೆ. 

ವಯೋ ಸಹಜ ಕಾಯಿಲೆ ಹಾಗೂ ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಭಾನುವಾರ ತಡರಾತ್ರಿ  ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.

ವಿಜಯಪುರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದು ಜನಿಸಿದ್ದ ಕಾಹು 2003 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಸೀಮಸಾಬ ಹುಸೇನಸಾಬ ಬಿಜಾಪುರ ಅಗಲಿಕೆಯಿಂದ ಜಾನಪದ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು  ಸಂತಾಪ ಸೂಚಿಸಿದ್ದಾರೆ.

PREV
Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ