20 ವರ್ಷಗಳಿಂದ ಭೂ ಪರಿಹಾರ ನೀಡದ ನೌಕರನಿಗೆ ಚಪ್ಪಲಿ ಏಟು; ರೈತನ ಪರ ನಿಂತ ಲೋಕಾಯುಕ್ತ, ಸುಮೊಟೊ ಕೇಸ್ ದಾಖಲು

Kannadaprabha News   | Kannada Prabha
Published : Jun 19, 2026, 06:01 AM IST
  Bagalkote

ಸಾರಾಂಶ

20 ವರ್ಷಗಳಿಂದ ಭೂ ಪರಿಹಾರ ಸಿಗದ ಕಾರಣ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ್ದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಲೋಕಾಯುಕ್ತರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಮಾಧ್ಯಮ ವರದಿ ಆಧರಿಸಿ ಈ ಕ್ರಮ ಕೈಗೊಂಡಿದ್ದು, ಸಂಬಂಧಿತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಬಾಗಲಕೋಟೆ (ಜೂ.19): ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ ಪ್ರಕರಣ ಇದೀಗ ರಾಜ್ಯ ಲೋಕಾಯುಕ್ತದ ಗಮನಕ್ಕೆ ಬಂದಿದ್ದು, ಚಪ್ಪಲಿ ಏಟು ನೀಡಿದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಮಾಧ್ಯಮದ ವರದಿಯಾಧರಿಸಿ ಬೆಂಗಳೂರು ಲೋಕಾಯುಕ್ತರು(Lokayukta) ಸುಮೊಟೊ ಕೇಸ್‌(Sumoto Case) ದಾಖಲಿಸಿಕೊಂಡಿದ್ದಾರೆ.

20 ವರ್ಷದಿಂದ ಭೂಪರಿಹಾರ ಸಿಗದೆ ಬೇಸತ್ತಿದ್ದ ರೈತ

20 ವರ್ಷದಿಂದ ಸ್ವಾಧೀನಕ್ಕೊಳಪಟ್ಟ ಭೂಮಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ 2ರ ನ್ಯಾಯಮೂರ್ತಿ ಬಿ.ವೀರಪ್ಪ(Lokayukta B Veerappa) ಅವರ ಆದೇಶದ ಮೇರೆಗೆ ಸುಮೊಟೊ ಕೇಸ್ ದಾಖಲಿಸಿಕೊಳ್ಳಲಾಗಿದೆ. ಜೊತೆಗೆ, ಸಂಬಂಧಿತ ಅಧಿಕಾರಿಗಳಿಗೆ ಜುಲೈ 27ರಂದು ವಿಚಾರಣೆಗೆ ಹಾಜರಾಗಲು ನಿರ್ದೇಶನ ನೀಡಲಾಗಿದೆ.

ರೈತನ ಪರ ಸುಮೊಟೊ ಕೇಸ್‌ ದಾಖಲಿಸಿದ ಲೋಕಾಯುಕ್ತ

ಬಸಪ್ಪ ದೊಡ್ಡಮನಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕೇಸ್ ವರ್ಕರ್ ನೀಲಕಂಠ ಅಂಕದ ಅವರಿಗೆ ಚಪ್ಪಲಿ ಏಟು ನೀಡಿದ್ದ. ಈ ಬಗ್ಗೆ ಬಾಗಲಕೋಟೆ ನವನಗರ ಠಾಣೆಯಲ್ಲಿ ನೀಲಕಂಠ ಅವರು ದೂರು ದಾಖಲಿಸಿದ್ದರು. ನಂತರ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಿಂದಲೂ ದೂರು ದಾಖಲಾಗಿತ್ತು. ಬಳಿಕ ರೈತ ಬಸಪ್ಪನನ್ನು ಬಂಧಿಸಿ ನವನಗರ ಪೊಲೀಸರು ಬಿಡುಗಡೆ ಮಾಡಿದ್ದರು. ಗುರುವಾರ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳ ವಿರುದ್ಧ, ದಲಿತ ಸಂಘರ್ಷ ಸಮಿತಿ ಭೀಮವಾದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಾಗಲಕೋಟೆ ಲೋಕಾಯುಕ್ತ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ದರು. ಇದರ ಬೆನ್ನಲ್ಲೇ ರೈತನ ಪರ ಸುಮೊಟೊ ಕೇಸ್‌ ದಾಖಲಾಗಿದೆ.

PREV
Read more Articles on
click me!

Recommended Stories

RBI: ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್‌ ಲೈಸೆನ್ಸ್‌ ರದ್ದು, ದಿವಾಳಿಗೆ ಕಾರಣವೇನು? ನಿಮ್ಮ ಹಣ ಮರಳಿ ಬರುತ್ತಾ?
Interview: ಬಿಜೆಪಿ ರಾಜ್ಯಾಧ್ಯಕ್ಷ ಗೊಂದಲಕ್ಕೆ ಯಾವುದೇ ಕ್ಷಣ ವರಿಷ್ಠರಿಂದ ಪರಿಹಾರ: ರಾಧಾಮೋಹನ