ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

By Kannadaprabha NewsFirst Published Aug 14, 2021, 8:16 AM IST
Highlights
  • ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ
  • ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿಯಲ್ಲಿ ಘಟನೆ

ಚಾಮರಾಜನಗರ (ಆ.14): ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮಾಂಬಳ್ಳಿ ಗ್ರಾಮದ ಪ್ರೇಮಿಗಳಾದ ಕಾಂಚನಾ(20) ಶ್ರೀನಿವಾಸ್‌ (23) ಮೃತ ದುರ್ದೈವಿಗಳು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಆಗಿದ್ದು, ಶ್ರೀನಿವಾಸ್‌ ಚಾಲಕ ವೃತ್ತಿ ಮಾಡುತ್ತಿದ್ದ. ಮೃತರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. 

ಬೆಳಗಾವಿ: ಸಹೋದರರ ಜೊತೆಗೂಡಿ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ..!

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಎಸ್ಪಿ ದಿವ್ಯಾ ಸಾರಾ ಥಾಮಸ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!