ಜನರ ಮೇಲೆ ಮತ್ತೊಂದು ಹೊರೆ... ಸಿಲಿಂಡರ್ ದರ ಏರಿಕೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ

Published : Jun 07, 2026, 05:18 PM IST
Dr G Parameshwar

ಸಾರಾಂಶ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್..

ತುಮಕೂರು (ಜೂ.07): ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್ ದರವನ್ನು ಈ ತಿಂಗಳಲ್ಲೇ ಎರಡು ಬಾರಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಿರುವುದಾಗಿ ಹೇಳಿದರು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ಪೂರೈಕೆ ಕುಂಠಿತವಾಗಿದೆ ಎಂಬ ಕಾರಣವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ ರಷ್ಯಾ ಸೇರಿದಂತೆ ಹಲವು ಪರ್ಯಾಯ ಮೂಲಗಳು ಲಭ್ಯವಿರುವಾಗಲೂ ಪದೇ ಪದೇ ಬೆಲೆ ಏರಿಕೆ ಮಾಡುತ್ತಿರುವುದು ಸಮರ್ಥನೀಯವಲ್ಲ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರದ ಜವಾಬ್ದಾರಿ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತ, ಅನಿಲದ ಲಭ್ಯತೆ ಹಾಗೂ ಇತರೆ ಆರ್ಥಿಕ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಬೆಲೆ ನಿಗದಿಪಡಿಸಬೇಕು. ಸಾಮಾನ್ಯ ಜನರ ಹಿತಾಸಕ್ತಿ ಮತ್ತು ಜೀವನೋಪಾಯವನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು.

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳನ್ನು ಪದೇ ಪದೇ ಹೆಚ್ಚಿಸುವ ಬದಲು, ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವತ್ತ ಗಮನಹರಿಸಬೇಕು. ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಿ ಜನಹಿತದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಡಿಸಿಎಂ ಪರಮೇಶ್ವರ್ ಆಗ್ರಹಿಸಿದರು.

PREV
Read more Articles on
click me!

Recommended Stories

ಐಟಿ ಕೆಲ್ಸ ಬಿಟ್ಟು ಬೆಂಗಳೂರಲ್ಲಿ ಆಟೋ ಓಡಿಸ್ತಿರೋ ಲೇಡಿ: ಅಮೆರಿಕದಲ್ಲಿಯೂ ಕನ್ನಡತಿಯ ಹವಾ
ಮುಂದಿನ 3 ಗಂಟೆ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್