ಮಹದಾಯಿ ಯೋಜನೆ: ಸಂಕ್ರಾಂತಿ ನಂತರ ಉಗ್ರ ಹೋರಾಟ

Suvarna News   | Asianet News
Published : Jan 11, 2020, 10:10 AM IST
ಮಹದಾಯಿ ಯೋಜನೆ: ಸಂಕ್ರಾಂತಿ ನಂತರ ಉಗ್ರ ಹೋರಾಟ

ಸಾರಾಂಶ

ಮಹದಾಯಿ ಯೋಜನೆ ಜಾರಿ ಸಂಬಂಧ ಹಲವು ಬಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಾಯಾಧಿಕರಣ ನೀಡಿರುವ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದ ಸರನಾಯ್ಕರ

ನರಗುಂದ(ಜ.11): ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಸರ್ಕಾರ ಜಾರಿ ಮಾಡದಿರುವುದು ಹೋರಾಟಗಾರರಗೆ ನೋವು ತಂದಿದೆ. ಆದ್ದರಿಂದ ಈ ಸಂಕ್ರಾತಿ ಹಬ್ಬದ ನಂತರ ಮಹದಾಯಿ ಯೋಜನೆ ಜಾರಿಗಾಗಿ ಮತ್ತೇ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ರೈತ ಸೇನಾ ಸದಸ್ಯ ಹನಮಂತ ಸರನಾಯ್ಕರ ಹೇಳಿದರು.

1639ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಂಡಾಯ ನೆಲದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಹದಾಯಿ ಹೋರಾಟಗಾರರು ನಿರಂತರ ಹೋರಾಟ ಮಾಡಿದ್ದರಿಂದ ಈ ಮಹದಾಯಿ ಜಲ ವಿವಾದಕ್ಕೆ ನೇಮಕವಾದ ನ್ಯಾಯಾಧಿಕರಣದ ನ್ಯಾಯಾಧೀಶರು 2018ರಲ್ಲಿ ಕರ್ನಾಟಕ ರಾಜ್ಯಕ್ಕೆ 13.42 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಿ ಒಂದು ವರ್ಷ ಗತಿಸಿದರೂ ಕೂಡ ಈ ನೀರು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡದಿರುವುದು ಖಂಡನಾರ್ಹ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಕುರಿತು ಈಗಾಗಲೇ ಹಲವು ಬಾರಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಾಯಾಧಿಕರಣ ನೀಡಿರುವ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ್ದರಿಂದ 4 ಜಿಲ್ಲೆ 11 ತಾಲೂಕಿನ ಮಹದಾಯಿ ಹೋರಾಟಗಾರರು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಯಾಗಲು ಹೋರಾಟಗಾರರು ಯಾವ ರೀತಿ ಆಳುವ ಸರ್ಕಾರಗಳ ವಿರುದ್ಧ ಹೋರಾಟ ಮಾಡಬೇಕೆಂದು ಚರ್ಚೆ ಮಾಡಿ ಈ ಸಂಕ್ರಾಂತಿ ಹಬ್ಬದ ನಂತರ ಮಹದಾಯಿಗಾಗಿ ಬಂಡಾಯ ನೆಲದಲ್ಲಿ ಉಗ್ರ ಹೋರಾಟ ಪ್ರಾರಂಭಿಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಡಿಯಪ್ಪ ಕೋರಿ, ಎಸ್‌.ಬಿ. ಜೋಗಣ್ಣವರ, ಎ.ಪಿ. ಪಾಟೀಲ, ಬಸವರಾಜ ಐನಾಪೂರ, ಅರ್ಜುನ ಮಾನೆ, ಮಲ್ಲೇಶಪ್ಪ ಅಣ್ಣಿಗೇರಿ, ಸುಭಾಸ ಗಿರಿಯಣ್ಣವರ, ಸಂಗಪ್ಪ ಶಾನವಾಡ, ವೆಂಕಪ್ಪ ಹುಜರತ್ತಿ, ವಾಸು ಚವ್ಹಾಣ, ಯಲ್ಲಪ್ಪ ಗುಡದೇರಿ, ಮಾರುತಿ ಬಡಿಗೇರ, ಬಸವ್ವ ಪೂಜಾರ, ಮಹಾದೇವಪ್ಪ ಐನಾಪೂರ, ಮಂಜುಳಾ ಸರನಾಯ್ಕರ, ಮಲ್ಲಪ್ಪ ಐನಾಪೂರ, ಕೆ.ಎಚ್‌. ಮೊರಬದ, ನಾಗರತ್ನ ಸವಳಭಾವಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಈರಣ್ಣ ಗಡಗಿ, ಸೋಮಲಿಂಗ್ಪ ಆಯಿಟ್ಟಿ, ಸೇರಿದಂತೆ ಮುಂತಾದವರು ಇದ್ದರು.
 

PREV
click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!