ಸಾರ್ವಜನಿಕ ಸ್ಥಳದಲ್ಲಿ LED ಪರದೆಯಲ್ಲಿ ಮಹಾನಾಯಕ ವೀಕ್ಷಿಸಿದ ಬಿಜೆಪಿ ಮುಖಂಡ

Published : Sep 29, 2020, 12:40 PM IST
ಸಾರ್ವಜನಿಕ ಸ್ಥಳದಲ್ಲಿ LED ಪರದೆಯಲ್ಲಿ ಮಹಾನಾಯಕ ವೀಕ್ಷಿಸಿದ ಬಿಜೆಪಿ ಮುಖಂಡ

ಸಾರಾಂಶ

ಹಾಸನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಹಾನಾಯಕ ಧಾರಾವಾಹಿ ಪ್ರದರ್ಶನ ಮಾಡಲಾಯಿತು. ಈ ವೇಳೆ ಸಾರ್ವಜನಿಕರೊಂದಿಗೆ ಬಿಜೆಪಿ ಮುಖಂಡರು ಈ ಧಾರಾವಾಹಿ ವೀಕ್ಷಿಸಿದರು.

ಬಸವಾಪಟ್ಟಣ (ಸೆ.29): ಡಾ.ಬಿ.ಆರ್‌.ಅಂಬೇಡ್ಕರ್‌ ಜೀವನಾಧಾರಿತ ಮಹಾನಾಯಕ ಧಾರಾವಾಹಿಯ 25 ನೇ ಸಂಚಿಕೆ ಪ್ರಕಟವಾದ ಹಿನ್ನೆಲೆಯಲ್ಲಿ ಇಲ್ಲಿಗೆ ಸಮೀಪದ ಕೇರಳಾಪುರ ಗ್ರಾಮದ ಬಸ್‌ ನಿಲ್ದಾಣದ ಬಳಿ ವಿಶ್ವಜ್ಞಾನಿ ಡಾ.ಬಿ.ಆರ್‌ ಅಂಬೇಡ್ಕರ್‌ ಯುವಕ ಸಂಘ ಹೊನ್ನೇನಹಳ್ಳಿ ಹಾಗೂ ಡಾ. ಮಂತರ್‌ಗೌಡ ಅಭಿಮಾನಿ ಬಳಗದ ಸಹಯೋಗದಲ್ಲಿ ಭಾನುವಾರ ಸಂಜೆ ಕೇರಳಾಪುರ ಗ್ರಾಮದಲ್ಲಿ ಎಲ್‌ಇಡಿ ಪರದೆಯಲ್ಲಿ ಧಾರಾವಾಹಿ ಪ್ರರ್ದಶನವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು.

ಸಂಜೆ 6.30 ಕ್ಕೆ ಮಹಾ ನಾಯಕ ಧಾರಾವಾಹಿಯ ಬ್ಯಾನರ್‌ ಅನಾವರಣ ಮಾಡಿ ಪುಷ್ಪನಮನ ಸಲ್ಲಿಸಲಾಯಿತು. ಧಾರಾವಾಹಿ ಪ್ರರ್ದಶನದ ವೇಳೆ ಮಾಜಿ ಸಚಿವ ಎ. ಮಂಜು ಪ್ರರ್ದಶನ ವೀಕ್ಷೀಸಿ ಮಾತನಾಡಿ, ಡಾ.ಅಂಬೇಡ್ಕರ್‌ ಸಂವಿಧಾನ ಶಿಲ್ಪಿಯಾಗಿದ್ದು, ಅವರ ತತ್ವ ಆರ್ದಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ.ಬಿ.ಆರ್‌ ಅಂಬೇಡ್ಕರ್‌ ಮಹಾನ್‌ ನಾಯಕರು. ಇಂದಿನ ಪೀಳಿಗೆಗೆ ಅವರು ಆದರ್ಶಪ್ರಾಯ ಎಂದರು.

ಮಹಾನಾಯಕ ಧಾರಾವಾಹಿ ಸ್ಥಗಿತಕ್ಕೆ ಬೆದರಿಕೆ : ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ

ಇದೇ ವೇಳೆ ದೊಡ್ಡಮಗ್ಗೆ ಜಿಲ್ಲಾ ಪಂಚಾಯ್ತಿ ಸದಸ್ಯ ರವಿ, ಯುವ ನಾಯಕ ಶಿವು, ವಿಶ್ವಜ್ಞಾನಿ ಡಾ.ಬಿ.ಆರ್‌ ಅಂಬೇಡ್ಕರ್‌ ಯುವಕ ಸಂಘದ ಅಧ್ಯಕ್ಷ ಎಚ್‌.ಪಿ. ಪುನೀತ್‌ಕುಮಾರ್‌, ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಖಂಜಾಚಿ ಹರೀಶ್‌, ರಾಜೇಶ್‌, ಸಮಾಸಮಾಜ ವೇದಿಕೆ ಬಸವಾಪಟ್ಟಣದ ಪುಟ್ಟಸ್ವಾಮಿ, ಬೇಲೂರಯ್ಯ, ಸ್ವಾಮಯ್ಯ ಇದ್ದರು.

PREV
click me!

Recommended Stories

ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ
ಮಂಗಳೂರು KFC ಮಳಿಗೆ, ಮೈಸೂರಿನ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ! ಕೊಳೆತ ಮಾಂಸ ಪತ್ತೆ