Chikkamagaluru: ಅನುಮತಿ ನಿರಾಕರಣೆ ಮಧ್ಯೆಯೂ ದಲಿತ ಪರ ಸಂಘಟನೆಗಳಿಂದ ಮಹಿಷಾ ದಸರಾ ಆಚರಣೆ

Published : Oct 30, 2024, 01:15 PM IST
Chikkamagaluru: ಅನುಮತಿ ನಿರಾಕರಣೆ ಮಧ್ಯೆಯೂ ದಲಿತ ಪರ ಸಂಘಟನೆಗಳಿಂದ ಮಹಿಷಾ ದಸರಾ ಆಚರಣೆ

ಸಾರಾಂಶ

ಜಿಲ್ಲಾಧಿಕಾರಿ ಅನುಮತಿ ನಿರಾಕರಣೆ ಮಧ್ಯೆಯೂ ವಿವಿಧ ದಲಿತ ಪರ ಸಂಘಟನೆಗಳು ಮಹಿಷ ದಸರಾ ಆಚರಿಸಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.  

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.30): ಜಿಲ್ಲಾಧಿಕಾರಿ ಅನುಮತಿ ನಿರಾಕರಣೆ ಮಧ್ಯೆಯೂ ವಿವಿಧ ದಲಿತ ಪರ ಸಂಘಟನೆಗಳು ಮಹಿಷ ದಸರಾ ಆಚರಿಸಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವಕಾಶ ಕೊಟ್ಟಿರಲಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ದಲಿತ ಸಂಘಟನೆಯ ಇಬ್ಬರಿಗೆ ನೋಟಿಸ್ ಕೂಡ ಜಾರಿ ಮಾಡಿದ್ದರು. ಆದರೆ, ಇಂದು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ 25ಕ್ಕೂ ಹೆಚ್ಚು ದಲಿತ ಮುಖಂಡರು ಮಹಿಷಾಸುರನ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿ ಜೈಕಾರ ಕೂಗಿ, ಆಚರಣೆ ಮಾಡಿದರು.

ಮಹಾರಾಜನ ವಿರುದ್ಧ ಅಪಪ್ರಚಾರ: ಮಹಿಷ ರಾಜನಿಂದಲೇ ಮೈಸೂರಿಗೆ ಮೈಸೂರು ಅಂತ ಹೆಸರು ಬಂದಿದ್ದು. ಆತ ಬೌದ್ಧ ಧರ್ಮದ ಪ್ರಚಾರಕನಾಗಿದ್ದ, ಆದಿವಾಸಿ ಮಹಾರಾಜನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುವುದು ಖಂಡನಿಯ. ಖಾದಿ-ಕಾವಿ ಹಾಗೂ ಕಿಡಿಗೇಡಿಗಳಿಂದ ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತವಾಗುತ್ತಿದೆ. ಈ ಆಚರಣೆಯನ್ನು ಪ್ರತಿ ವರ್ಷವೂ ಮಾಡೇ ತೀರುತ್ತೇವೆ ತಡೆಯಲು ಯಾರಿಂದ ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಕೋವಿಡ್‌ ವರದಿ ನೋಡಿ ನನಗೇ ಕೊರೋನಾ ಬರುವಂತಿದೆ: ಡಿ.ಕೆ.ಶಿವಕುಮಾರ್‌

ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದರು. ಆದರೆ, ನಾವು ಅವರಿಗೆ ಮನವಿ ಮಾಡಿದ್ದೇವು. ಯಾವುದೇ ಕಾರಣಕ್ಕೂ ಮಹಿಷ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ದಲಿತ ಮುಖಂಡರು ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿದ್ರು. ಇದೇ ವೇಳೆ, ಮುನ್ನೆಚ್ಚರಿ ಕಾರ್ಯಕ್ರಮವಾಗಿ 25ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಸೇರಿ ನೂರಕ್ಕೂ ಹೆಚ್ಚು ಪೊಲೀಸರು ನಗರದಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

PREV
Read more Articles on
click me!

Recommended Stories

ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!