ದೇವರ ವಿಗ್ರಹಕ್ಕೆ ಬಿಯರ್‌ ಸುರಿದು ಅಭಿಷೇಕ ಮಾಡಿದ ಉದ್ಯಮಿ

Published : Sep 30, 2019, 09:00 AM IST
ದೇವರ ವಿಗ್ರಹಕ್ಕೆ ಬಿಯರ್‌ ಸುರಿದು ಅಭಿಷೇಕ ಮಾಡಿದ  ಉದ್ಯಮಿ

ಸಾರಾಂಶ

ದೇವರ ವಿಗ್ರಹಕ್ಕೆ ಅಭಿಷೇಕ ಮಾಡಲು ಲಿಕ್ಕರ್ ಬಳಸಿದ್ದ ವ್ಯಕ್ತಿಯೋರ್ವ ಇದೀಗ ಬಂಧಿತನಾಗಿದ್ದಾನೆ. 

ರಾಮನಗರ [ಸೆ.30]: ಕುಡಿದ ಅಮ​ಲಿ​ನಲ್ಲಿ ದೇವರ ವಿಗ್ರ​ಹಕ್ಕೆ ಬಿಯರ್‌ನಿಂದ ಅಭಿ​ಷೇಕ ಮಾಡಿ​ದ್ದ​ಲ್ಲದೇ ಆಶ್ರ​ಮ​ದೊ​ಳಗೆ ಬಾಟಲಿ ತೂರಿದ ಉದ್ಯ​ಮಿ​ಯೊ​ಬ್ಬ​ನನ್ನು ಬಿಡದಿ ಠಾಣೆ ಪೊಲೀ​ಸರು ಬಂಧಿ​ಸಿ​ದ್ದಾರೆ. 

ಬೆಂಗಳೂರಿನ ಮಧುಲೋಕ ಲಿಕ್ಕರ್‌ ಪ್ರೈವೇಟ್‌ ಲಿಮಿಟೆಡ್‌ನ ವ್ಯವ​ಸ್ಥಾ​ಪಕ ನಿರ್ದೇ​ಶಕ ಕೆ.ಎಸ್‌.ಲೋಕೇಶ್‌ ಬಂಧಿತ ಆರೋಪಿ.

ಸೆಪ್ಟೆಂಬರ್‌ 27ರ ಬೆಳಗಿನ ಜಾವ ಕಾರಿನಲ್ಲಿ ಯುವತಿಯ ಜೊತೆ ಬಂದಿದ್ದ ಉದ್ಯಮಿ ಲೋಕೇಶ್‌ ಬಿಡದಿಯ ನಿತ್ಯಾನಂದ ಆಶ್ರಮದ ಬಳಿ ಕುಡಿದು ಗಲಾಟೆ ಮಾಡಿದ್ದರು. ನಿತ್ಯಾನಂದ ಆಶ್ರಮದ ಬಳಿಯಿದ್ದ ದೇವರ ವಿಗ್ರಹಕ್ಕೆ ಬಿಯರ್‌ನಿಂದ ಅಭಿಷೇಕ ಮಾಡಿದ್ದಲ್ಲದೆ ಆಶ್ರಮದ ವ್ಯಕ್ತಿಯೊಬ್ಬನ ಮೇಲೆ ಬಾಟಲ್‌ ಎಸೆದು ಗಲಾಟೆ ಮಾಡಿದ್ದರು ಎನ್ನಲಾ​ಗಿ​ದೆ. 

ಈ ಕುರಿತು ರಾಜವರ್ಧನ ಎಂಬುವವರು ದೂರು ನೀಡಿದ್ದರು. ದೂರಿನ ಅನ್ವಯ ಬಿಡದಿ ಪೊಲೀಸರು ಲೋಕೇಶ್‌ ಅವ​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

PREV
click me!

Recommended Stories

ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಗೆ ಜಿಬಿಎ ಹೊಸ ರೂಲ್ಸ್; ನಿಮ್ಮ ಆಸ್ತಿಯನ್ನ ಉಳಿಸಿಕೊಳ್ಳಲು ಲಾಸ್ಟ್ ಚಾನ್ಸ್!
ಆನ್‌ಲೈನ್ ಗೇಮ್‌ ಸುಳಿಗೆ ಸಿಲುಕಿ ಜೀವ ಬಿಟ್ಟ ಬೀದರ್ MBBS ವಿದ್ಯಾರ್ಥಿ, ಬಡತನದಲ್ಲಿ ಓದಿಸಿದ್ದೆ ಸರ್ ತಂದೆ ಕಣ್ಣೀರು