ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣ

Published : Jun 24, 2019, 03:27 PM ISTUpdated : Jun 24, 2019, 06:04 PM IST
ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣ

ಸಾರಾಂಶ

ವಿಧಾನಸೌಧದ 3ನೇ ಮಹಡಿಯ  ಶೌಚಾಲಯದಲ್ಲಿ ಗುತ್ತಿಗೆ ನೌಕರನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬೆಂಗಳೂರು, (ಜೂ.24) : ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

"

ವಿಧಾನಸೌಧದ 3ನೇ ಮಹಡಿಯ  ಶೌಚಾಲಯದಲ್ಲಿ ರೇವಣ್ಣ ಕುಮಾರ್ (45) ಎಂಬುವವರು ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ರೇವಣ್ಣ ಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಆನೂರು ಗ್ರಾಮದವರು ಎಂದು ತಿಳಿದುಬಂದಿದೆ.

"

ರೇವಣ್ಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗ್ರಂಥಾಲಯದಲ್ಲಿ ಗುತ್ತಿಗೆ ನೌಕರನಾಗಿದ್ದು, ಕಳೆದ ಏಳು ತಿಂಗಳು ಕಾಲ ವೇತನ ನೀಡಿಲ್ಲ. ಇದರಿಂದ ಬೇಸತ್ತು ವಿಧಾನಸೌಧಕ್ಕೆ ಆಗಮಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಗಾಯಗೊಂಡಿರುವ ರೇವಣ್ಣ ಕುಮಾರ್‌ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,  ವಿಧಾನಸೌಧ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸುತ್ತಿದ್ದಾರೆ. 

"

 

PREV
click me!

Recommended Stories

ಶಿವಮೊಗ್ಗ ಲವ್ ಮ್ಯಾರೇಜ್: 2ನೇ ಮದುವೆಗೆ ಒಪ್ಪದ ಮೊದಲ ಹೆಂಡತಿಯನ್ನ ಯಮಲೋಕಕ್ಕೆ ಕಳಿಸಿದ ಗೋಪಿ!
Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!