ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

Kannadaprabha News   | Asianet News
Published : Aug 08, 2021, 10:01 AM IST
ಶಿವಮೊಗ್ಗ : ರೈಲಿಗೆ ಸಿಲುಕಿ  ವ್ಯಕ್ತಿ ಆತ್ಮಹತ್ಯೆ

ಸಾರಾಂಶ

ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ  ಆತ್ಮಹತ್ಯೆಗೆ ಶರಣು ಶಿವಮೊಗ್ಗದ ಹರಿಗೆ ಮತ್ತು ಮಲವಗೊಪ್ಪದ ನಡುವೆ ಇರುವ ಯಲವಟ್ಟಿ ರೈಲ್ವೆ ಗೇಟ್ ಬಳಿ ದುರ್ಘಟನೆ

ಶಿವಮೊಗ್ಗ (ಆ.08): ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ  ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ಶನಿವಾರ ಸಂಜೆ ನಡೆದಿದೆ. 

ಶಿವಮೊಗ್ಗದ ಹರಿಗೆ ಮತ್ತು ಮಲವಗೊಪ್ಪದ ನಡುವೆ ಇರುವ ಯಲವಟ್ಟಿ ರೈಲ್ವೆ ಗೇಟ್ ಬಳಿ ದುರ್ಘಟನೆ ನಡೆದಿದೆ.  ಮೃತ ವ್ಯಕ್ತಿಯನ್ನು ಶಿವಮೊಗ್ಗದ ರಾಗಿಗುಡ್ಡ ನಿವಾಸಿ ಅವಿನಾಶ್ ಎಂದು ಗುರುತಿಸಲಾಗಿದೆ. 

ಕೋಲಾರ: ಮೊಬೈಲ್‌ ಫೋನ್‌ ಸಾಗಿಸುತ್ತಿದ್ದ ಲಾರಿ ದರೋಡೆ..!

ಶನಿವಾರ ಸಂಜೆ ಸುಮಾರು 5 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದ್ದು, ತಾಳಗುಪ್ಪ - ಮೈಸೂರು ಇಂಟರ್ ಸಿಟಿ ರೈಲಿಗೆ ಅವಿನಾಶ್ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಅವಿನಾಶ್‌ ರಾಗಿಗುಡ್ಡದ ನಿವಾಸಿಯಾಗಿದ್ದು ಡಿಟಿ ಕಂಪನಿಯಲ್ಲಿ ಮೆಡಿಕಲ್ ರೆಪ್ರಸೆಂಟಿಟಿವ್ ಎಂದು ಹೇಳಲಾಗುತ್ತಿದೆ. ಇಬ್ಬರು ಸಹೋದರಿಯರು ತಂದೆ ಇದ್ದು, ಈತನ ತಂದೆ ಸ್ವಂತ ವ್ಯಾಪಾರ ಮಾಡಿಕೊಂಡಿದ್ದಾರೆ. 

ಅವಿನಾಶ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. 

ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!