ನೀರು ಒಯ್ಯಲು ಬಂದ ಯುವತಿ ಗುಪ್ತಾಂಗಕ್ಕೆ ಕೈ ಹಾಕಿ ಕಿರುಕುಳ

Kannadaprabha News   | Asianet News
Published : Mar 03, 2020, 08:29 AM IST
ನೀರು ಒಯ್ಯಲು ಬಂದ ಯುವತಿ ಗುಪ್ತಾಂಗಕ್ಕೆ ಕೈ ಹಾಕಿ ಕಿರುಕುಳ

ಸಾರಾಂಶ

ಯುವತಿಯ ಗುಪ್ತಾಂಗ ಮುಟ್ಟಿಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೆಲ್ಲೂರುಪುರಂ ನಿವಾಸಿ ಮಹೇಶ್‌(31) ಬಂಧಿತ.  

ಬೆಂಗಳೂರು(ಮಾ.03): ಯುವತಿಯ ಗುಪ್ತಾಂಗ ಮುಟ್ಟಿಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೆಲ್ಲೂರುಪುರಂ ನಿವಾಸಿ ಮಹೇಶ್‌(31) ಬಂಧಿತ.

ಸಂತ್ರಸ್ತೆ ಹಾಗೂ ಮಹೇಶ್‌ ಪರಿಚಿತರಾಗಿದ್ದು, ಆರೋಪಿ ಪದೇ ಪದೇ ಸಂತ್ರಸ್ತೆಯನ್ನು ಚುಡಾಯಿಸುತ್ತಿದ್ದ. ಹಲವು ಬಾರಿ ಬುದ್ದಿ ಹೇಳಿದ್ದರೂ ಸರಿ ಹೋಗಿರಲಿಲ್ಲ. ಫೆ.26ರಂದು ರಾತ್ರಿ 7.30ರ ಸುಮಾರಿಗೆ ನೆಲ್ಲೂರುಪುರಂ ಮುಖ್ಯರಸ್ತೆಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಯುವತಿ ನೀರು ತೆಗೆದುಕೊಂಡು ಮನೆಗೆ ಹೋಗುತ್ತಿದ್ದಳು.

ಕ್ಯಾಬ್‌ಗೆ ಗುದ್ದಿ ಮಗುಚಿ ಬಿದ್ದ ಪೊಲೀಸ್‌ ಜೀಪ್‌!

ಈ ವೇಳೆ ಯುವತಿಗೆ ಏಕಾಏಕಿ ಎದುರು ಬಂದ ಆರೋಪಿ ಸಂತ್ರಸ್ತೆಯ ಗುಪ್ತಾಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಆತನಿಂದ ತಪ್ಪಿಸಿಕೊಂಡು ಬಂದು ಸಂತ್ರಸ್ತೆ ದೂರು ನೀಡಿದ್ದರು. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಸಣ್ಣ-ಪುಟ್ಟಕೆಲಸ ಮಾಡಿಕೊಂಡು ಜೀವನ ಸಾಗುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

PREV
click me!

Recommended Stories

ಮೈಸೂರು ರೇಷ್ಮೆ ಕಾರ್ಖಾನೆ ಉಳಿಸಿ, ಕ್ರೀಡಾಂಗಣ ವಿರೋಧಿಸಿ ಹೋರಾಟ: ಸರ್ಕಾರಕ್ಕೆ ಮಾರ್ಚ್ 6ರ ಗಡುವು ಕೊಟ್ಟ ಆರ್. ಅಶೋಕ್!
ಯುವಜನರ ಭವಿಷ್ಯಕ್ಕಾಗಿ 'ಕರ್ನಾಟಕ ಯುವ ಆಯೋಗ' ಅಗತ್ಯವಿದೆ: ಸಿದ್ದರಾಮಯ್ಯ ಸರ್ಕಾರಕ್ಕೆ ಡಾ.ನಸೀಮ್ ಅಹ್ಮದ್ ಮನವಿ