ಆಟೋ ನಿಲ್ಲಿಸಬೇಡ ಎಂದಿದ್ದಕ್ಕೆ ಸ್ನೇಹಿತನನ್ನೇ ಇರಿದು ಕೊಂದ

Kannadaprabha News   | Asianet News
Published : Dec 22, 2019, 08:41 AM IST
ಆಟೋ ನಿಲ್ಲಿಸಬೇಡ ಎಂದಿದ್ದಕ್ಕೆ ಸ್ನೇಹಿತನನ್ನೇ ಇರಿದು ಕೊಂದ

ಸಾರಾಂಶ

ಪಾರ್ಕಿಂಗ್ ವಿಚಾರವಾಗಿ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯನ್ನು 15 ನಿಮಿಷದಲ್ಲೇ ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು [ಡಿ.22]:  ಆಟೋ ಪಾರ್ಕಿಂಗ್‌ ವಿಚಾರಕ್ಕೆ ನಡೆದಿದ್ದ ಜಗಳ ಸ್ನೇಹಿತನ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ಬೈಯಪ್ಪನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದ್ದು, ಕೊಲೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಹದಿನೈದೇ ನಿಮಿಷದಲ್ಲಿ ಬಂಧಿಸಿದ್ದಾರೆ.

ಸುದ್ದುಗುಂಟೆಪಾಳ್ಯ ನಿವಾಸಿ ಸಂತೋಷ್‌ (27) ಕೊಲೆಯಾದವ. ಕೃಷ್ಣಪ್ಪ ಗಾರ್ಡನ್‌ ನಿವಾಸಿ ಆನಂದ್‌ (26) ಬಂಧಿತ.

ಸಂತೋಷ್‌ ಮಹದೇವಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್‌ ಆಗಿದ್ದು, ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದ. ಪತ್ನಿ ಜತೆ ಸುದ್ದುಗುಂಟೆಪಾಳ್ಯದಲ್ಲಿ ನೆಲೆಸಿದ್ದ ಸಂತೋಷ್‌ ಆಟೋ ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆರೋಪಿ ಆನಂದ್‌ ಸಹ ಆಟೋ ಚಾಲಕನಾಗಿದ್ದು, ಇಬ್ಬರು ಸ್ನೇಹಿತರಾಗಿದ್ದರು.

ಇತ್ತೀಚೆಗೆ ಆಟೋ ಪಾರ್ಕಿಂಗ್‌ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಇದೇ ವಿಚಾರಕ್ಕೆ ಆನಂದ್‌, ಸಂತೋಷ್‌ ಮೇಲೆ ದ್ವೇಷ ಸಾಧಿಸುತ್ತಿದ್ದ. ಶನಿವಾರ ಸಂಜೆ ಆರು ಗಂಟೆ ಸುಮಾರಿಗೆ ಸಂತೋಷ್‌ ಮನೆಗೆ ಏಕಾಏಕಿ ನುಗ್ಗಿದ ಆರೋಪಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಸಂತೋಷನ ಚೀರಾಟ ಕೂಗಿ ಸ್ಥಳೀಯರು ಜಮಾಯಿಸಿದ್ದರು. 

ಬೆಂಗಳೂರು: ಕಂಡಕ್ಟರ್ ಮೇಲಿನ ಆ್ಯಸಿಡ್ ದಾಳಿ‌ ಹಿಂದೆ ಮೈದುನ -ಅತ್ತಿಗೆಯ ಪ್ರೇಮ್ ಕಹಾನಿ...

ಅಷ್ಟೊತ್ತಿಗೆ ಅದೇ ಮಾರ್ಗದಲ್ಲಿ ಗಸ್ತಿನಲ್ಲಿದ್ದ ಬೈಯಪ್ಪನಹಳ್ಳಿ ಪೊಲೀಸರು ಜನ ಸೇರಿದ್ದನ್ನು ಕಂಡು ಸ್ಥಳಕ್ಕೆ ತೆರಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಘಟನೆ ನಡೆದ ಹದಿನೈದು ನಿಮಿಷದಲ್ಲೇ ಆನಂದ್‌ನನ್ನು ಬಂಧಿಸಿದ್ದಾರೆ. ಘಟನೆ ನಡೆದ ವೇಳೆ ಸಂತೋಷ್‌ ಮನೆಯಲ್ಲಿ ಪತ್ನಿ ಇರಲಿಲ್ಲ. ಗಾಯಾಳು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.

PREV
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!