ಕೊಡಗಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ : ವ್ಯಕ್ತಿ ಸಾವು

Suvarna News   | Asianet News
Published : May 28, 2021, 11:01 AM IST
ಕೊಡಗಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ  : ವ್ಯಕ್ತಿ ಸಾವು

ಸಾರಾಂಶ

ಬೆಳ್ಳಂಬೆಳಗ್ಗೆ ಸಾಮಾನು ತರಲು ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕೊಡಗು ಜಿಲ್ಲೆಯ ತಿತಿಮತಿ ಅರಣ್ಯ ಪ್ರದೇಶದಲ್ಲಿ ಘಟನೆ

ಕೊಡಗು (ಮೇ.28): ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ  ಮೃತಪಟ್ಟ ಘಟನೆ ಕೊಡಗು ಜಿಲ್ಲೆಯಲ್ಲಿಂದು ನಡೆದಿದೆ. 

ಕೊಡಗು ಜಿಲ್ಲೆ ದೇವಮಚ್ಚಿ ಗ್ರಾಮದಲ್ಲಿ ಇಂದು ಮುಂಜಾನೆ 6-30 ರ ಸುಮಾರಿಗೆ ಮನೆಗೆ ಆಹಾರ ಸಾಮಾಗ್ರಿಗಳನ್ನು ಖರೀದಿಸಲು ತಿತಿಮತಿಗೆ ತೆರಳುತ್ತಿದ್ದ ವೇಳೆ ನಾಣು (60) ಎಂಬಾತ ಆನೆ ದಾಳಿಯಿಂದ ಮೃತಪಟ್ಟಿದ್ದಾರೆ.

ದೇವಮಚ್ಚಿಯಿಂದ ತಿತಿಮತಿಗೆ ಬರುತ್ತಿರುವ ವೇಳೆ ಎದುರಾದ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಮಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಸಿಡಿಲು ಬಡಿದು ಒಂದೇ ಕಡೆ 18 ಆನೆಗಳು ದುರಂತ ಸಾವು ...

ಮುಂಜಾನೆಯ ವೇಳೆ ಮೈಸೂರು ಮುಖ್ಯ ರಸ್ತೆಯಿಂದ ದೇವಮಚ್ಚಿ ರಸ್ತೆ ಕಡೆಗೆ ಕಾಡಾನೆಯೊಂದು ತೆರಳಿದ್ದನ್ನು ಗ್ರಾಮಸ್ಥರು ನೋಡಿದ್ದು, ಮುಖ್ಯ ರಸ್ತೆಯ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಆನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮದ ಜನರು ಭೀತರಾಗಿದ್ದಾರೆ.

PREV
click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!