ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ! 16 ದಿವಸ ಹುಡುಕಾಡಿದ ಬಳಿಕ ಪೊಲೀಸರಿಂದ ಸೆರೆ

Kannadaprabha News   | Kannada Prabha
Published : Feb 19, 2026, 07:23 AM IST
Vijayapura Wife death Case

ಸಾರಾಂಶ

ದೇವರಹಿಪ್ಪರಗಿಯಲ್ಲಿ, ಸಾಲದ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯನ್ನು ಕೊಂ*ದು ಮನೆಯ ಆವರಣದಲ್ಲಿ ಹೂತುಹಾಕಿದ್ದಾನೆ. ನಂತರ ಆಕೆ ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದು, 24 ದಿನಗಳ ಬಳಿಕ ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ.

 ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆಯಲ್ಲಿ ಹೆಂಡತಿಯನ್ನು ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ದೇವರಹಿಪ್ಪರಗಿ ನಿವಾಸಿ ಸರೋಜಿನಿ ಪ್ರಭು ರತ್ನಾಕರ (44) ಕೊ*ಲೆಯಾದವಳು. ಈಕೆಯ ಪತಿ, ಪ್ರಭು ರತ್ನಾಕರ (46) ಕೊ*ಲೆ ಆರೋಪಿ. ಆರೋಪಿ ಪ್ರಭು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ವಿವಿಧೆಡೆ ಕೈ ಸಾಲ ಮಾಡಿಕೊಂಡು, ವಿಪರೀತ ಸಾಲ ಮಾಡಿದ್ದ. ಸಾಲಗಾರರಿಗೆ ತನ್ನ ಪತ್ನಿಯ ಹೆಸರಿನಲ್ಲಿ ಚೆಕ್ ನೀಡಿದ್ದ. ಈ ಸಂಬಂಧ ಸರೋಜಿನಿ ವಿರುದ್ಧ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ, ಹಣ ಕಟ್ಟುವಂತೆ ಸರೋಜಿನಿ ಆತನನ್ನು ಒತ್ತಾಯಿಸಿದ್ದಳು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಹೆಂಡತಿ ಸಾವಿನ ಬಗ್ಗೆ ಕಥೆ ಕಟ್ಟಿದ್ದ ಪಾಪಿ ಪತಿ

ಇದೇ ವಿಚಾರವಾಗಿ ಜನವರಿ 24ರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ, ಕೋಪದ ಭರದಲ್ಲಿ ಪ್ರಭು ರತ್ನಾಕರ, ಖಾರ ಕುಟ್ಟುವ ಹಾರೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಆಕೆ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಳು. ಬಳಿಕ, ಮನೆಯ ಆವರಣದಲ್ಲೇ ಗುಂಡಿ ತೋಡಿ, ಶವವನ್ನು ಹೂತು ಹಾಕಿದ್ದ. ಫೆ.2ರಂದು ದೇವರಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ, ಮನೆಗೆ ಸಾಮಾನು ತರಲು ಕಿರಾಣಿ ಅಂಗಡಿಗೆ ಹೋಗಿ ಬರುವೆ ಎಂದು ಹೊರಹೋದ ಪತ್ನಿ ತಿರುಗಿ ಬಂದಿಲ್ಲ. ಆಕೆಗಾಗಿ ಎಲ್ಲಾ ಕಡೆ ಹುಡುಕಾಡಿದ್ದೇನೆ. ಆದರೆ ಆಕೆಯ ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೂರು ನೀಡಿದ್ದ. ಪತ್ನಿಯ ತವರು ಮನೆಯವರು, ನೆಂಟರ ಜೊತೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದ.

ಪೊಲೀಸ್ ತನಿಖೆ ವೇಳೆ ಸತ್ಯ ಒಪ್ಪಿಕೊಂಡ ಗಂಡ

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಈತನ ಮೇಲೆಯೇ ಸಂಶಯ ಬಂದಿತ್ತು. ತೀವ್ರ ವಿಚಾರಣೆ ಬಳಿಕ ಆತ ಸತ್ಯ ಒಪ್ಪಿಕೊಂಡಿದ್ದು, ತಾನೇ ಕೊ*ಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಕೊ*ಲೆ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹೂತಿದ್ದ ಶವ ಹೊರ ತೆಗೆದು, ಮರಣೋತ್ತರ ಪರೀಕ್ಷೆ ಬಳಿಕ ತವರು ಮನೆಯವರಿಗೆ ಶವ ಹಸ್ತಾಂತರಿಸಿದ್ದಾರೆ.

PREV
Read more Articles on
click me!

Recommended Stories

ಕೈದಿಗಳಿಗೆ ಇನ್ನು ಜೈಲಿನಲ್ಲಿ ಡ್ರಗ್ಸ್‌ ಪರೀಕ್ಷೆ ಕಡ್ಡಾಯ, ಒಂದು ವಾರದಲ್ಲಿ ಅನುಷ್ಠಾನ:ಡಿಜಿಪಿ ಅಲೋಕ್‌ ಕುಮಾರ್
Karnataka Shakti Scheme dues ‘ಶಕ್ತಿ’ ಯೋಜನೆಯ ಎಷ್ಟು ಹಣ ಬಾಕಿ ಇದೆ?: ಮಾಹಿತಿ ಕೇಳಿದ ಹೈಕೋರ್ಟ್‌