ಇಂಜೆಕ್ಷನ್ ಕೊಟ್ಟು ಕೊಂದ ಗಂಡ : ಕಣ್ಮುಂದೆಯೇ ನರಳಿ ಪ್ರಾಣ ಬಿಟ್ಲು ಹೆಂಡ್ತಿ

Suvarna News   | Asianet News
Published : Jan 15, 2020, 11:28 AM IST
ಇಂಜೆಕ್ಷನ್ ಕೊಟ್ಟು ಕೊಂದ ಗಂಡ : ಕಣ್ಮುಂದೆಯೇ ನರಳಿ ಪ್ರಾಣ ಬಿಟ್ಲು ಹೆಂಡ್ತಿ

ಸಾರಾಂಶ

ಮದುವೆ ಆಗಿ ಇನ್ನೂ ಒಂದು ವರ್ಷವೂ ಕಳೆದಿರಲಿಲ್ಲ. ಅಷ್ಟರಲ್ಲೇ ಗಂಡ ಹೆಂಡ್ತಿ ಮಧ್ಯೆ ವೈಮನಸ್ಸು ಶುರುವಾಗಿತ್ತು. ಇದು ಅಂತ್ಯವಾಗಿದ್ದು ಮಾತ್ರ ಘೋರವಾಗಿ.

ರಾಮನಗರ [ಜ.15]: ದಾಂಪತ್ಯ ಕಲಹ ಹಿನ್ನೆಲೆ ಪತ್ನಿಗೆ ಚುಚ್ಚು ಮದ್ದು ಕೊಟ್ಟು ಗಂಡನೇ ಕೊಲೆ‌ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. 

ಜಿಲ್ಲೆಯ ಹನುಮಂತ ನಗರದಲ್ಲಿ ಘಟನೆ ನಡೆದಿದ್ದು, ಪತ್ನಿ  ದೀಪಾಳನ್ನು (24) ಪತಿ  ವೆಂಕಟೇಶ್ (30) ಕೊಲೆ ಮಾಡಿದ್ದಾನೆ. 

ಆರೋಪಿ ವೆಂಕಟೇಶ್ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ನೌಕರನಾಗಿ‌ ಕೆಲಸ ಮಾಡುತ್ತಿದ್ದು, 11 ತಿಂಗಳ ಹಿಂದೆಯಷ್ಟೆ ವಡ್ಡರಹಳ್ಳಿ ದೀಪಾಳೊಂದಿಗೆ ಮದುವೆ ಮಾಡಲಾಗಿತ್ತು. 

ಹುಷಾರು.... ಬೀಗ ಒಡೆಯದೇ 5 ಕ್ವಿಂಟಾಲ್ ಕೆಂಪುಬಂಗಾರ ದೋಚಿದ ಕಳ್ಳರು!...

ವೆಂಕಟೇಶ್ -ದೀಪಾ ನಡುವೆ ಮದುವೆಯಾದಗಿನಿಂದಲೂ ನಿತ್ಯ ಜಗಳ ನಡೆಯುತ್ತಿತ್ತು. ಹಲವು ಬಾರಿ ಹಿರಿಯರ ಸಮ್ಮುಖದಲ್ಲಿ ನ್ಯಾಯ ತೀರ್ಮಾನ ವಾಗಿತ್ತು. ಾದರೂ ಕಲಹ ಮುಂದುವರಿದಿತ್ತು. 

ನಟಿ ಪರಾರಿ ಕೇಸ್: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಸಾವು, ನೋಡಲು ಬಾರದ ನಾನ್‌ಸೆನ್ಸ್‌ ನಟಿ...

ಮಂಗಳವಾರ ರಾತ್ರಿಯೂ ಇಬ್ಬರ ಮಧ್ಯೆ ಜಗಳವಾಗಿದೆ. ಈ ವೇಳೆ ದೀಪಾಳಿಗೆ ಗೊತ್ತಿಲ್ಲದೇ ಚುಚ್ಚು ಮದ್ದು ಕೊಟ್ಟಿದ್ದಾನೆ. ಇದರಿಂದ ನರಳಿ ನರಳಿ ಕೊನೆಗೆ ದೀಪಾ ಮೃತಪಟ್ಟಿದ್ದಾಳೆ. 

ಈ ಸಂಬಂಧ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!