ಹೆಚ್ಚಿನ ಬಾಡಿಗೆ ಆಮಿಷ: ಕಾರು ಒಯ್ದು ಮಾರಾಟ!

Kannadaprabha News   | Asianet News
Published : Feb 20, 2020, 10:40 AM IST
ಹೆಚ್ಚಿನ ಬಾಡಿಗೆ ಆಮಿಷ: ಕಾರು ಒಯ್ದು ಮಾರಾಟ!

ಸಾರಾಂಶ

ಟ್ರಾವೆಲ್ಸ್‌ ಏಜೆನ್ಸಿಗಳಿಗೆ ಕಾರು ಬಾಡಿಗೆ ಕೊಡಿಸುವ ನೆಪದಲ್ಲಿ ವಾಹನಗಳ ಮಾಲಿಕರಿಗೆ ವಂಚಿಸಿ ಹಣ ಲಪಟಾಯಿಸುತ್ತಿದ್ದ ಇಬ್ಬರನ್ನು ಯಲಹಂಕ ಉಪ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  

ಬೆಂಗಳೂರು(ಫೆ.20): ಟ್ರಾವೆಲ್ಸ್‌ ಏಜೆನ್ಸಿಗಳಿಗೆ ಕಾರು ಬಾಡಿಗೆ ಕೊಡಿಸುವ ನೆಪದಲ್ಲಿ ವಾಹನಗಳ ಮಾಲಿಕರಿಗೆ ವಂಚಿಸಿ ಹಣ ಲಪಟಾಯಿಸುತ್ತಿದ್ದ ಇಬ್ಬರನ್ನು ಯಲಹಂಕ ಉಪ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಲೀಲ್‌ವುಲ್ಲಾ ಮತ್ತು ಅಕ್ಷಯ್‌ ಬಂಧಿತರಾಗಿದ್ದು, ಆರೋಪಿಗಳಿಂದ .40 ಲಕ್ಷ ಮೌಲ್ಯದ ಎಂಟು ಕಾರುಗಳನ್ನು ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಾದ ನಿರಂಜನ, ಸೋಮಶೇಖರ ಹಾಗೂ ಮಾದೇಶನಿಗೆ ಹುಡುಕಾಟ ನಡೆದಿದೆ. ಇತ್ತೀಚಿಗೆ ಕಾರು ನಾಪತ್ತೆ ಬಗ್ಗೆ ದೂರುಗಳು ಬಂದಿದ್ದವು. ಅದರನ್ವಯ ತನಿಖೆ ನಡೆಸಿದಾಗ ವಂಚಕರ ಜಾಲ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾದಿನಿ ಮೇಲಿನ ಮೋಹಕ್ಕೆ ಆಕೆ ಪತಿಯ ಕೊಲೆ ಮಾಡಿಸಿದ!

ಕಾರುಗಳನ್ನು ಬಾಡಿಗೆಗೆ ಕೊಡುವ ಕಾರು ಹಾಗೂ ಟಿಟಿ ವಾಹನಗಳ ಮಾಲಿಕರ ಬಗ್ಗೆ ಆರೋಪಿಗಳು ಮಾಹಿತಿ ಸಂಗ್ರಹಿಸುತ್ತಿದ್ದರು. ಬಳಿಕ ಅವರನ್ನು ಪರಿಚಯಿಸಿಕೊಂಡು ಆರೋಪಿಗಳು, ತಿಂಗಳಿಗೆ ಹೆಚ್ಚಿನ ಬಾಡಿಗೆ ಕೊಡಿಸುವುದಾಗಿ ನಂಬಿಸಿ ಕಾರುಗಳನ್ನು ಪಡೆಯುತ್ತಿದ್ದರು. ಬಳಿಕ ಅವುಗಳನ್ನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದಲ್ಲದೆ, ಕೆಲವು ವಾಹನಗಳನ್ನು ಅಡಮಾನವಿಟ್ಟು ವಂಚಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!