ಮಂಡ್ಯ ಬಳಿ ಐರಾವತ ಬಸ್-ಕಾರು ನಡುವೆ ಭೀಕರ ಅಪಘಾತ!

Published : Sep 16, 2018, 09:25 PM ISTUpdated : Sep 19, 2018, 09:27 AM IST
ಮಂಡ್ಯ ಬಳಿ ಐರಾವತ ಬಸ್-ಕಾರು ನಡುವೆ ಭೀಕರ ಅಪಘಾತ!

ಸಾರಾಂಶ

ಬೆಂಗಳೂರು- ಮೈಸೂರು ಹೆದ್ದಾರಿಯ ಮದ್ದೂರು ತಾಲೂಕಿನ ರುದ್ರಾಕ್ಷಿ ಪುರದ ಭೀಕರ ಅಪಘಾತ ಸಂಭವಿಸಿದೆ. ಐರಾವತ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿಜದ್ದಾರೆ.

ಮಂಡ್ಯ(ಸೆ.16): ಐರಾವತ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರು- ಮೈಸೂರು ಹೆದ್ದಾರಿಯ ಮದ್ದೂರು ತಾಲೂಕಿನ ರುದ್ರಾಕ್ಷಿ ಪುರದ ಬಳಿ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಮೈಸೂರಿನ ಕೆ.ಸಿ. ಲೇಔಟ್ ನ ಸುಕನ್ಯಾ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತೀಯಾದ ವೇಗದಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮದ್ದೂರು ಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ
HD Kumaraswamy Birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!