ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ: ಆರೋಪ

Suvarna News   | Asianet News
Published : Dec 21, 2019, 08:00 AM IST
ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ: ಆರೋಪ

ಸಾರಾಂಶ

ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೂರ್ವ ನಿಯೋಜಿತ ಎಂದು ಮಂಗಳೂರಿನ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂ‌ನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಂಗಳೂರು(ಡಿ.21): ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೂರ್ವ ನಿಯೋಜಿತ ಎಂದು ಮಂಗಳೂರಿನ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂ‌ನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಸ್ಲಿಂ ಸಂಘಟನೆ ಪಿಎಫ್‌ಐ ಸಂಘಟನೆಯ ಮುಖಂಡ ಅಶ್ರಫ್ ಕೆ. ಅಗ್ನಾಡಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ. ಮುಸ್ಲಿಂ ಯುವಕರು ಶಾಂತ ರೀತಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಅವರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಸಿಡಿಸಿ ಆಕ್ರೋಶಿತರನ್ನಾಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಂಗಳೂರು: ಕಾಂಗ್ರೆಸ್ ಪಕ್ಷದ ನಿಯೋಗ ಪೊಲೀಸ್ ವಶಕ್ಕೆ

ಪೊಲೀಸರು ಗೋಲಿಬಾರ್ ನಡೆಸೋ ಅಗತ್ಯವಿರಲಿಲ್ಲ. ಪೊಲೀಸರು ಕಾನೂ‌ನು ಉಲ್ಲಂಘನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿ ನಂತರದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ತಳೆದಿತ್ತು. 

ಮಂಗಳೂರು: ಬೆಳ್ತಂಗಡಿಯಲ್ಲಿ ಐದು ಬಸ್‌ಗಳಿಗೆ ಕಲ್ಲುತೂರಾಟ..!

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!