ಫೇಸ್‌ಬುಕ್‌ ಕಮೆಂಟ್‌ ಮಾಡಿದ್ದಕ್ಕೆ ತಲ್ವಾರ್‌ನಿಂದ ಹಲ್ಲೆ..!

Published : Aug 03, 2019, 03:42 PM ISTUpdated : Aug 03, 2019, 03:43 PM IST
ಫೇಸ್‌ಬುಕ್‌ ಕಮೆಂಟ್‌ ಮಾಡಿದ್ದಕ್ಕೆ ತಲ್ವಾರ್‌ನಿಂದ ಹಲ್ಲೆ..!

ಸಾರಾಂಶ

ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರೋದಕ್ಕೆ ವ್ಯಕ್ತಿಯನ್ನು ತಲ್ವಾರ್‌ನಿಂದ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬೈಂದೂರಿನಲ್ಲಿ ನಡೆದಿದೆ. ಹಲ್ಲೆ ನಡೆಸುವ ಮೊದಲೇ ವ್ಯಕ್ತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು.

ಮಂಗಳೂರು(ಆ.03): ಬೈಂದೂರಿನ ಶಿರೂರು ಗ್ರಾಮದ ಕೆಳಪೇಟೆಯ ನಿವಾಸಿ ನಿಖಿಲೇಶ್‌ ಶೆಟ್ಟಿ(24) ಎಂಬವರು ಫೇಸ್‌ಬುಕ್‌ನಲ್ಲಿ ಕಮೆಂಟ್‌ ಹಾಕಿದ್ದಕ್ಕೆ ಕೆಲವು ಯುವಕರು ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಅವರಿಗೆ ಪೂರ್ವಾಹ್ನ 11ಕ್ಕೆ ಉದಯ ಪೂಜಾರಿ ಎಂಬುವವರು ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು. ಸಂಜೆ 4 ಗಂಟೆಗೆ ನಿಖಿಲೇಶ್‌ ಅವರು ಅಂಗಡಿಯಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದ ಉದಯ ಪೂಜಾರಿ, ಕಿರಣ ಪೂಜಾರಿ ಹಾಗೂ ಶಿವ ಪೂಜಾರಿ ಅವರು, ಪೇಸ್‌ಬುಕ್‌ನಲ್ಲಿ ಭಾರಿ ಕಮೆಂಟ್‌ ಮಾಡುತ್ತೀಯಾ ಎಂದು ಕೈಯಿಂದ ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದಾರೆ.

ಜನರ ಆಹವಾಲು ಆಲಿಸಲು ‘ಫೇಸ್‌ಬುಕ್‌’: ಶಿವಮೊಗ್ಗ ಡೀಸಿಯ ವಿನೂತನ ಕ್ರಮ

ಸಂಜೆ 6 ಗಂಟೆಗೆ ಪುನಃ ಅಖಿಲೇಶ್‌ ಅವರ ಮನೆಗೆ ಕಾರಿನಲ್ಲಿ ಬಂದ ಉದಯ ಪೂಜಾರಿ ಮತ್ತು ಇತರರು ತಲವಾರಿನಿಂದ ಎಡಕೆನ್ನೆಗೆ ಕಡಿದು ಗಾಯಗೊಳಿಸಿದ್ದಾರೆ ಮತ್ತು ಕಾಲಿನಿಂದ ತುಳಿದು ಹಲ್ಲೆ ಮಾಡಿರುತ್ತಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿಸಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಆಧುನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಗೆ ಎಐ ಬಳಕೆ: ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌
ಸಚಿವ ಸಂಪುಟ ಪುನರ್ ರಚಿಸಿ ಹೊಸಬರಿಗೆ ಅವಕಾಶ ಕೇಳುವುದು ತಪ್ಪಲ್ಲ: ಶಾಸಕ ಎ.ಎಸ್. ಪೊನ್ನಣ್ಣ