ನೇತ್ರಾವತಿಗೆ ಮತ್ತೊಬ್ಬ ಆಹುತಿ: ಸಿದ್ಧಾಥ್‌ ಹೆಗ್ಡೆ ಆತ್ಮಹತ್ಯೆ ಸ್ಥಳದಲ್ಲಿಯೇ ನದಿಗೆ ಹಾರಿದ ಯುವಕ

Published : Jan 03, 2020, 09:39 AM IST
ನೇತ್ರಾವತಿಗೆ ಮತ್ತೊಬ್ಬ ಆಹುತಿ: ಸಿದ್ಧಾಥ್‌ ಹೆಗ್ಡೆ ಆತ್ಮಹತ್ಯೆ ಸ್ಥಳದಲ್ಲಿಯೇ ನದಿಗೆ ಹಾರಿದ ಯುವಕ

ಸಾರಾಂಶ

ಮಂಗಳೂರಿನ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸೇತುವೆಗೆ ಬಂದು ನದಿಗೆ ಹಾರುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಫೆ ಕಾಫಿ ಡೇ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣ ನಂತರ ಸೇತುವೆ ಬಳಿ ಸುರಕ್ಷತೆ ಬಗ್ಗೆ ಒತ್ತು ನೀಡಲಾಯಿತಾದರೂ ಇದೀಗ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರು(ಜ.03): ಮಂಗಳೂರಿನ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸೇತುವೆಗೆ ಬಂದು ನದಿಗೆ ಹಾರುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಫೆ ಕಾಫಿ ಡೇ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣ ನಂತರ ಸೇತುವೆ ಬಳಿ ಸುರಕ್ಷತೆ ಬಗ್ಗೆ ಒತ್ತು ನೀಡಲಾಯಿತಾದರೂ ಇದೀಗ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರಿನ ನೇತ್ರಾವತಿ ಸೇತುವೆಗೆ ಮತ್ತೊಬ್ಬ ಆಹುತಿಯಾಗಿದ್ದಾನೆ. ಬೆಳ್ಳಂಬೆಳಗ್ಗೆ ಬೈಕ್ ನಿಲ್ಲಿಸಿ ಸೇತುವೆಯಿಂದ ನದಿಗೆ ಹಾರಿದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲಬೈಲು ನಿವಾಸಿ ನವೀಶ್ ಕೊಟ್ಟಾರಿ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸಿದ್ಧಾರ್ಥ ಹೆಗ್ಡೆ ಆತ್ಮಹತ್ಯೆ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಯತ್ನ

ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಘಟನ ನಡೆದಿದೆ. ಕಾಫಿ ಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಯಲ್ಲೇ ಯುವಕನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಿದ್ಧಾರ್ಥ್‌ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?

PREV
click me!

Recommended Stories

2028ರ ಸಿಎಂ ಬಗ್ಗೆ ಬಂತು ಭವಿಷ್ಯವಾಣಿ: ಬೂದೇಶ್ವರ ದೇವಸ್ಥಾನದಲ್ಲಿ ಎಚ್.ಜಿ.ರಾಮುಲು ಮಾತು
30 ಕಿ.ಮೀ ಹೋಗಿ ದಾರಿ ತಪ್ಪಿದ್ದ 14ರ ಶಿವಮೊಗ್ಗದ ಮೂಕ ಬಾಲಕಿ; WhatsApp ಒಂದು ಫೋಟೋದಿಂದ ಪತ್ತೆ ಹಚ್ಚಿದ ಪೊಲೀಸರು!