ಮಂಗಳೂರು-ಸುಬ್ರಹ್ಮಣ್ಯ ರೈಲು ಮಾರ್ಗ: ಪ್ರಯಾಣಿಕರಿಗೆ ಮಹತ್ವದ ಸುದ್ದಿ, ರೈಲು ಸೇವೆಗಳ ಪರಿಷ್ಕರಣೆ

Published : May 11, 2026, 08:00 PM IST
indian railways

ಸಾರಾಂಶ

ಮಂಗಳೂರು–ಸುಬ್ರಹ್ಮಣ್ಯ ರಸ್ತೆ ರೈಲು ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿಯಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ರೈಲು ಸೇವೆಗಳ ವಿಳಂಬವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 56629 ಮತ್ತು 56630 ಈಗ ನಿಗದಿತ ದಿನಾಂಕಗಳಿಂದ ತಮ್ಮ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಿದೆ.

ಮಂಗಳೂರು–ಸುಬ್ರಹ್ಮಣ್ಯ ರಸ್ತೆ ರೈಲು ಮಾರ್ಗದ ಸುಬ್ರಹ್ಮಣ್ಯ ರಸ್ತೆ–ಎಡಮಂಗಲ ವಿಭಾಗಗಳ ನಡುವೆ ನಡೆಯುತ್ತಿರುವ ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮೊದಲು ನಿಯಂತ್ರಣಕ್ಕೆ ಒಳಪಡಿಸಿ ಮರುನಿಗದಿಪಡಿಸಲಾಗಿದ್ದ ರೈಲು ಸೇವೆಗಳಲ್ಲಿ ಇದೀಗ ಮಹತ್ವದ ಪರಿಷ್ಕರಣೆ ಮಾಡಿ ಮರುಸ್ಥಾಪನೆ ಮಾಡಲಾಗಿದೆ.

ಈ ಹಿಂದಿನ ವೇಳಾಪಟ್ಟಿ ಕ್ಯಾನ್ಸಲ್

ಈ ಮೊದಲು ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ಏಪ್ರಿಲ್ 15ರಿಂದ ಜೂನ್ 4ರವರೆಗೆ ಪ್ರತಿದಿನ 35 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ ಎಂದು ಪ್ರಕಟಿಸಲಾಗಿತ್ತು. ಆದರೆ ಇದೀಗ ಈ ನಿರ್ಧಾರವನ್ನು ಪರಿಷ್ಕರಿಸಲಾಗಿದ್ದು, ಮೇ 11ರಿಂದ ಜೂನ್ 4ರವರೆಗೆ ಈ ರೈಲು ತನ್ನ ನಿಯಮಿತ ವೇಳಾಪಟ್ಟಿಯಂತೆ ಹಾಗೂ ನಿಗದಿತ ಮಾರ್ಗದಲ್ಲೇ ಯಾವುದೇ ಹೆಚ್ಚುವರಿ ವಿಳಂಬವಿಲ್ಲದೆ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಅದೇ ರೀತಿ, ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರಸ್ತೆ–ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲಿನ ಮರುನಿಗದಿಪಡಿಸುವಿಕೆಯಲ್ಲಿಯೂ ಬದಲಾವಣೆ ಮಾಡಲಾಗಿದೆ. ಮೊದಲಿನ ಅಧಿಸೂಚನೆಯ ಪ್ರಕಾರ ಏಪ್ರಿಲ್ 16, 18, 21, 23, 25, 28 ಮತ್ತು 30 ಹಾಗೂ ಮೇ 2, 5, 7, 9, 12, 14, 16, 19, 21, 23, 26, 28 ಮತ್ತು 30, ಜೊತೆಗೆ ಜೂನ್ 2 ಮತ್ತು 4ರಂದು ಸಂಚರಿಸುವ ರೈಲುಗಳಿಗೆ 15 ನಿಮಿಷಗಳ ವಿಳಂಬ ವಿಧಿಸಲಾಗಿತ್ತು.

ವಿಳಂಬವಿಲ್ಲದೆ ತನ್ನ ನಿಯಮಿತ ವೇಳಾಪಟ್ಟಿಯಂತೆ ಸಂಚಾರ

ಇದೀಗ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಮೇ 12, 14, 16, 19, 21, 23, 26, 28 ಮತ್ತು 30 ಹಾಗೂ ಜೂನ್ 2 ಮತ್ತು 4ರಂದು ಸಂಚರಿಸುವ ರೈಲು ಸಂಖ್ಯೆ 56630 ಮರುಸ್ಥಾಪನೆಯಾಗಿದ್ದು, ಈ ದಿನಗಳಲ್ಲಿ ರೈಲು ಯಾವುದೇ ವಿಳಂಬವಿಲ್ಲದೆ ತನ್ನ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಹಳಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ರೂಪಿಸಲಾದ ತಾತ್ಕಾಲಿಕ ನಿಯಂತ್ರಣ ಕ್ರಮಗಳಲ್ಲಿ ಸಡಿಲಿಕೆ ನೀಡಲಾಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲು ಸೇವೆಗಳನ್ನು ಹಂತ ಹಂತವಾಗಿ ಸಾಮಾನ್ಯ ಸ್ಥಿತಿಗೆ ಮರಳಿಸಲಾಗಿದೆ. ಪ್ರಯಾಣಿಕರು ಪರಿಷ್ಕೃತ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

PREV
Read more Articles on
click me!

Recommended Stories

ಉತ್ತರ ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಹುಬ್ಬಳ್ಳಿ, ವಿಜಯಪುರ ಜನರಿಗೆ ಈ ರೈಲಿನ ಟಿಕೆಟ್ ದರ ಇಳಿಕೆ!
ವಿಪತ್ತಿನಿಂದ ಪಾರಾಗಲು ಪ್ರಧಾನಿ ಮೋದಿ ಕರೆ ನೀಡಿದ್ದು, ಒಂದು ವರ್ಷ ಪಾಲಿಸಿ: ಸಿ.ಟಿ.ರವಿ