'ಸೋಲಿನ ಹತಾಶೆಗೆ ಬಿಜೆಪಿಗರಿಂದ ಗೂಂಡಾಗಿರಿ'

Kannadaprabha News   | Asianet News
Published : May 05, 2021, 03:14 PM IST
'ಸೋಲಿನ ಹತಾಶೆಗೆ ಬಿಜೆಪಿಗರಿಂದ ಗೂಂಡಾಗಿರಿ'

ಸಾರಾಂಶ

ಜನರ ತೀರ್ಪನ್ನು ಒಪ್ಪಿಕೊಂಡು ಅನಗತ್ಯ ದಾಂಧಲೆ ಎಬ್ಬಿಸುವುದು ಬಿಡಬೇಕಿದೆ| ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಕೂಡಲೇ ಆರೋಪಿಗಳನ್ನು ಬಂಧಿಸಬೇಕು| ಇಲ್ಲವಾದರೆ ಏನಾದರೂ ಅನಾಹುತ ಘಟನೆಗಳು ನಡೆದರೆ ಇದಕ್ಕೆ ಪೊಲೀಸ್‌ ಇಲಾಖೆಯೇ ಕಾರಣ: ತುರ್ವಿಹಾಳ್‌| 

ಮಸ್ಕಿ(ಮೇ.05): ಸೋಲಿನ ಹತಾಸೆಯಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‌ನವರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಇದಕ್ಕೆ ಸ್ವತಃ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರೇ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶಾಸಕ ಆರ್‌.ಬಸನಗೌಡ ತುರ್ವಿಹಾಳ ಆರೋಪಿಸಿದ್ದಾರೆ.

ಈ ಕುರಿತು ಮಂಗಳವಾರ ಹೇಳಿಕೆ ನೀಡಿರುವ ನೂತನ ಶಾಸಕ, ಮೇ 2ರಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಬಿಜೆಪಿಗರು ಗೂಂಡಾ ವರ್ತನೆಗೆ ಇಳಿದಿದ್ದಾರೆ. ಮಸ್ಕಿ ಪಟ್ಟಣ ಸೇರಿ ಹಳ್ಳಿಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಮುಗಿಬಿದ್ದು ಹಲ್ಲೆ ಮಾಡುತ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ. ಕೆಲವು ಕಡೆ ಸ್ವತಃ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ರೇ ಖುದ್ದು ತೆರಳಿ ಬಿಜೆಪಿ ಕಾರ್ಯಕರ್ತರು ಗಲಾಟೆಗೆ ಇಳಿಯುವಂತೆ ಪ್ರಚೋದನೆ ನೀಡುತ್ತಿದ್ದಾರೆ. 12 ವರ್ಷಗಳಿಂದ ಸಜ್ಜನ, ಸರಳ ಶಾಸಕ ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದ ಮಾಜಿ ಶಾಸಕನ ನೈಜ ಮುಖವಾಡ ಈ ರೀತಿ ಬಯಲಾಗಿದೆ. ಮೇ.3 ರಂದು ಮಸ್ಕಿಯ ದೈವದ ಕಟ್ಟೆಯಲ್ಲಿ ನಡೆದ ಅವರ ಮಕ್ಕಳು, ಸಂಬಂಧಕರ ಗೂಂಡಾ ವರ್ತನೆ ಇಡೀ ಮಸ್ಕಿಯೇ ನೋಡಿದೆ. ಅನಗತ್ಯವಾಗಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಬಿ.ಜಿ.ನಾಯಕ, ಸಿದ್ದಣ್ಣ ಹೂವಿನಬಾವಿ ಅವರ ಮನೆಗೆ ಹೋಗಿ ಗಲಾಟೆ ಮಾಡಿದ್ದಾರೆ. ಇಷ್ಟಲ್ಲದೇ ಹಲ್ಲೆಗೆ ಒಳಗಾದವರ ವಿರುದ್ದವೇ ಸುಳ್ಳು ಪ್ರತಿ ದೂರು ದಾಖಲು ಮಾಡಿದ್ದಾರೆ ಈ ರೀತಿ ನಡೆದುಕೊಳ್ಳುವುದು ಬಿಜೆಪಿಗರಿಗೆ ಶೋಭೆ ಅಲ್ಲ ಎಂದು ಹೇಳಿದ್ದಾರೆ.

'ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ: ಕಾಂಗ್ರೆಸ್‌ ಗೂಂಡಾಗಿರಿ ಆರಂಭ'

ಜನರ ತೀರ್ಪನ್ನು ಒಪ್ಪಿಕೊಂಡು ಅನಗತ್ಯ ದಾಂಧಲೆ ಎಬ್ಬಿಸುವುದು ಬಿಡಬೇಕಿದೆ. ಇನ್ನು ಮಾಜಿ ಶಾಸಕರ ಪುತ್ರರು ಹಲ್ಲೆ ಮಾಡಿದ ಸಂಗತಿ ನೈಜವಾಗಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡುವುದಲ್ಲದೇ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಏನಾದರೂ ಅನಾಹುತ ಘಟನೆಗಳು ನಡೆದರೆ ಇದಕ್ಕೆ ಪೊಲೀಸ್‌ ಇಲಾಖೆಯೇ ಕಾರಣವಾಗಲಿದೆ ಎಂದು ದೂರಿದ್ದಾರೆ.
 

PREV
click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
Bengaluru New Year Rules: ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ! ಏನೇನು ನಿರ್ಬಂಧ ತಿಳ್ಕೊಳ್ಳಿ