ಹೊಸ ಯೋಜನೆ ಬಗ್ಗೆ ಕೇಳಿದ್ರೆ ಸಿಟ್ಟಾಗ್ತಾರೆ ಸಚಿವರು

Published : Sep 12, 2019, 12:45 PM ISTUpdated : Sep 12, 2019, 12:57 PM IST
ಹೊಸ ಯೋಜನೆ ಬಗ್ಗೆ ಕೇಳಿದ್ರೆ ಸಿಟ್ಟಾಗ್ತಾರೆ ಸಚಿವರು

ಸಾರಾಂಶ

ಅಬಕಾರಿ ಇಲಾಖೆಯಲ್ಲಿ ಹೊಸ ಯೋಜನೆಗಳು ಇದೆಯಾ ಎಂದು ಕೇಳಿದ್ದಕ್ಕೆ ಅಬಕಾರಿ ಸಚಿವ ಫುಲ್ ಗರಂ ಆದ ಘಟನೆ ಕೋಲಾರದಲ್ಲಿ ನಡೆದಿದೆ. 

ಕೋಲಾರ [ಸೆ.12]: ಅಬಕಾರಿ ಇಲಾಖೆಯಲ್ಲಿ ಏನಾದ್ರು ಹೊಸ ಯೋಜನೆಗಳು ಇದೆಯಾ ಎಂದು ಕೇಳಿದ್ದಕ್ಕೆ ಸಚಿವ ನಾಗೇಶ್ ಫುಲ್ ಗರಂ ಆಗಿದ್ದಾರೆ.

ಕೋಲಾರದ ಮುಳುಬಾಗಿಲಿಗೆ ಇಂದು ತೆರಳಿದ್ದ ಅಬಕಾರಿ ಸಚಿವ ನಾಗೇಶ್ ನಾನು ಇಲ್ಲಿಗೆ ಬಂದಿದ್ದು ಬೇರೆ ಕೆಲಸಕ್ಕೆ, ಅದನ್ನು ಬಿಟ್ಟು ನನ್ನನ್ನು ಏನೂ ಕೇಳಬೇಡಿ. ನನ್ನ ಟೈಂ ವೇಸ್ಟ್ ಮಾಡಬೇಡಿ ಎಂದು ಕೋಪಗೊಂಡಿದ್ದಾರೆ. 

ಹೊಸ ಹೊಸ ಯೋಜನೆಗಳಲ್ಲಿ ನನ್ನ ಒಬ್ಬನ ತೀರ್ಮಾನ ಇರುವುದಿಲ್ಲ. ಸಿಎಂ ಜೊತೆ ಚರ್ಚಿಸಿಯೇ ಯೋಜನೆ ಜಾರಿಗೊಳಿಸುತ್ತೇನೆ ಎಂದು ಸಚಿವ ನಾಗೇಶ್ ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೆಲ ದಿನಗಳ ಹಿಂದಷ್ಟೇ ಮನೆ ಮನೆಗೆ ಎಣ್ಣೆ ಸರಬರಾಜು ಮಾಡಲಾಗುವುದು ಎಂದು ಹೇಳಿ ತೀವ್ರ ವಿರೋಧ ಎದುರಿಸಿದ್ದು,  ಬಳಿಕ ಈ ಯೋಜನೆಯನ್ನು ವಾಪಸ್ ಪಡೆದಿದ್ದರು. ಈ ಸಂಬಂಧ ಎಲ್ಲೆಡೆ ಸಚಿವರ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತವಾಗಿ ಪ್ರತಿಭಟನೆಗಳನ್ನು ನಡೆಸಲಾಗಿತ್ತು.

PREV
click me!

Recommended Stories

ಹಾಸನ: ನ್ಯಾಯ ಅಂದ್ರೆ ನ್ಯಾಯ, 66 ಪೈಸೆ ಮರುಪಾವತಿಸದೆ ಉಳಿಸಿಕೊಂಡ ಬ್ಯಾಂಕ್ ವಿರುದ್ಧ ಕೋರ್ಟ್ ಮೆಟ್ಟಲೇರಲು ನಿರ್ಧರಿಸಿದ ಗ್ರಾಹಕ!
ಮಲ್ಲಿಕಾರ್ಜುನ ಮುತ್ಯಾ ಕೇಸ್ ರದ್ದು ಮಾಡದಿದ್ದರೆ ಯಾದಗಿರಿ ಬಂದ್; ಜಿಲ್ಲಾಡಳಿತಕ್ಕೆ 2 ದಿನಗಳ ಗಡುವು ಕೊಟ್ಟ ಭಕ್ತರು