ಪ್ಯಾಕೇಜ್‌ನ ಪರಿಹಾರ ಶೀಘ್ರ ಬಿಡುಗಡೆ: ಸಚಿವ ಜಗದೀಶ ಶೆಟ್ಟರ್‌

By Kannadaprabha NewsFirst Published May 28, 2020, 7:10 AM IST
Highlights

ಲಾಕ್‌ಡೌನ್‌ನಿಂದ ಸಾಕಷ್ಟು ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ| ಈ ಹಿನ್ನೆಲೆ ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನುಕೂಲವಾಗಲೆಂದು ವಿಶೇಷ ಪ್ಯಾಕೇಜ್‌ ಘೋಷಿಸಿದೆ|ಕೆಲ ಫಲಾನುಭವಿಗಳಿಗೆ ಇನ್ನೂ ಪರಿಹಾರದ ಹಣ ಬಂದಿಲ್ಲ| ಕೆಲವೊಂದು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿರಲಿಕ್ಕಿಲ್ಲ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ| ಫಲಾನುಭವಿಗಳಿಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ|ಮುಖ್ಯಮಂತ್ರಿಗಳು ಕೊಟ್ಟಮಾತು ತಪ್ಪುವುದಿಲ್ಲ|

ಹುಬ್ಬಳ್ಳಿ(ಮೇ.28): ಲಾಕ್‌ಡೌನ್‌ ಹಿನ್ನೆಲೆ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ನ ಹಣ ಶೀಘ್ರದಲ್ಲೇ ಫಲಾನುಭವಿಗಳ ಕೈಸೇರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಸಾಕಷ್ಟು ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನುಕೂಲವಾಗಲೆಂದು ವಿಶೇಷ ಪ್ಯಾಕೇಜ್‌ ಘೋಷಿಸಿದೆ. ಕೆಲ ಫಲಾನುಭವಿಗಳಿಗೆ ಇನ್ನೂ ಪರಿಹಾರದ ಹಣ ಬಂದಿಲ್ಲ. ಕೆಲವೊಂದು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿರಲಿಕ್ಕಿಲ್ಲ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಫಲಾನುಭವಿಗಳಿಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ. ಮುಖ್ಯಮಂತ್ರಿಗಳು ಕೊಟ್ಟಮಾತು ತಪ್ಪುವುದಿಲ್ಲ ಎಂದರು.

ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಬೇರೆ ಬೇರೆ ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲಾಗಿದೆ. ರಾಜ್ಯದಲ್ಲಿ ಹಣಕಾಸು ಇಲಾಖೆ ಮುಖ್ಯಮಂತ್ರಿಗಳ ಬಳಿಯಿದ್ದು, ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನಿಗೆ ಉತ್ತರಿಸಿದರು.
 

click me!