
ತುಮಕೂರು (ಆ.14): ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ನಷ್ಟಉಂಟಾದರೆ ಆ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಬೇಕು ಎಂಬ ಕಾನೂನಾಗಿದ್ದು ರಾಜ್ಯದಲ್ಲಿ ಜಾರಿಯಾಗಬೇಕು ಅಷ್ಟೆಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆ ಈವರೆಗೂ ಅಂಥಾ ಪರಿಸ್ಥಿತಿ ನಿರ್ಮಾಣ ಆಗಿರಲಿಲ್ಲ. ಈ ಹಿಂದೆ ನಡೆದಿದ್ದ ಘಟನೆಗಳಲ್ಲಿ ಜಾರಿ ಮಾಡಿರಲಿಲ್ಲ. ಜಾರಿ ಕುರಿತು ಸರ್ಕಾರ ತೀರ್ಮಾನ ತಗೋಬೇಕು ಎಂದರು.
ಬೆಂಗಳೂರು ಗಲಭೆ ಮ್ಯಾಜಿಸ್ಟ್ರೇಟ್ ತನಿಖೆಗೆ, ಗಲಭೆಕೋರರಿಂದಲೇ ನಷ್ಟ ವಸೂಲಿ.
ಕೇಂದ್ರ ಸರ್ಕಾರದಲ್ಲಿ ಈಗಾಗಲೇ ಕಾನೂನಾಗಿದೆ. ಮುಖ್ಯಮಂತ್ರಿಗಳು ಕ್ವಾರಂಟೈನ್ನಲ್ಲಿದ್ದಾರೆ. ಅವರು ಬಂದು ಕೂತು ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಕ್ರಮ ಏನಿದ್ಯೋ ಅದನ್ನು ಖಂಡಿತ ಜಾರಿ ಮಾಡುವುದಾಗಿ ತಿಳಿಸಿದರು.
ಮೂರು ಸಾವಿರ ಜನ ಸೇರುತ್ತಾರೆ ಅಂದರೆ ಪ್ರಚೋದನೆ ಇಲ್ಲದೆ, ಪ್ಲಾನ್ ಇಲ್ಲದೆ, ಆರ್ಗನೈಸೇಶನ್ ಇಲ್ಲದೆ ಮಾಡುವುದಕ್ಕಾಗೋಲ್ಲ ಎಂದರು.