
ವಿಜಯಪುರ (ಜು.21): ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿಅವರು ಇಂದು ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನಲ್ಲಿರುವ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು.
ಜಲಾಶಯಕ್ಕೆ ಭೇಟಿ ನೀಡಿದ ಸಚಿವರು, ಡ್ಯಾಂ ಸ್ಥಿತಿಗತಿ ಪರಿಶೀಲನೆ ನಡೆಸಿದರು. ಈ ವೇಳೆ ಜಲಾಶಯದ ಗೇಟ್ ಮುಂಭಾಗಕ್ಕೆ ತೆರಳಿದ ಸಚಿವರು, ನೀರು ಬಿಡುಗಡೆ, ಗೇಟ್ಗಳ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಈ ವೇಳೆ ಕೆಬಿಜೆಎನ್ಎಲ್ ಮುಖ್ಯ ಇಂಜಿನೀಯರ್(ಸಿಇ) ಡಿ.ಬಸವರಾಜ್ ಮತ್ತು ಇತರೆ ಅಧಿಕಾರಿಗಳು ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟ, ಒಳಹರಿವು, ಹೊರಹರಿವಿನ ಕುರಿತು ಸ್ಥಳದಲ್ಲೇ ಮಾಹಿತಿ ನೀಡಿದರು.
ಜಲಾಶಯ ಪರಿಶೀಲನೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಅವರು ಆಲಮಟ್ಟಿ ವಾಟರ್ ಪಾರ್ಕ್ಗೂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ಪಾಟೀಲ, ಶಾಸಕರಾದ ಸಿಎಸ್ ನಾಡಗೌಡ (ಅಪ್ಪಾಜಿ), ಜಿಟಿ ಪಾಟೀಲ ಹಾಗೂ ಉಮೇಶ್ ಮೇಟಿ ಸೇರಿದಂತೆ ಹಲವರು ಸಚಿವರಿಗೆ ಸಾಥ್ ನೀಡಿದರು.
ಜಲಾಶಯ ಶೇಕಡ ಗರಿಷ್ಠ ಮಟ್ಟ ಇಂದಿನ ಮಟ್ಟ