ಧಾರವಾಡ ಗೌಳಿವಾಡಾ ಜನವಸತಿ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಸಚಿವ ಸಂತೋಷ್ ಲಾಡ್

By Govindaraj SFirst Published Aug 2, 2023, 1:21 PM IST
Highlights

ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ 

ಧಾರವಾಡ (ಆ.02): ಹಲವಾರು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

Latest Videos

ಉಪ ವಿಭಾಗ ಅಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಗೌಳಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರರ ಕುರಿತಾಗಿ ಜರುಗಿದ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ  ಚಿವರು. ಶಿವನಗರ, ರೇಣುಕಾನಗರ, ಟಿ.ಆರ್ ನಗರ, ಲಿಂಗನಕೊಪ್ಪ, ಕೊಕ್ಕೆರೆವಾಡ, ಉಡವನಾಗಲಾವಿ, ಹುಣಸಿ ಕುಮರಿ, ಜನವಸತಿ ಪ್ರದೇಶಗಳನ್ನು ಶೀಘ್ರವೇ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು  ಒದಗಿಸಲು ಕ್ರಮ ಕೈಗೊಳ್ಳುವಂತೆ ಸಚಿವರಾದ ಸಂತೋಷ್ ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಕುಸಿತ: ಸಿದ್ದರಾಮಯ್ಯ ಕಿಡಿ

ಅಳ್ನಾವರ ಮಾರ್ಗದಲ್ಲಿ ರಸ್ತೆಗೆ ಹೊಂದಿಕೊಂಡಿರುವ  ಶಿವನಗರ ಗೌಳಿ ವಾರ್ಡ್‍ದಲ್ಲಿ ಕಳೆದ ನಾಲ್ಕು ದಶಕಗಳಿಂದ ಗೌಳಿಗರು ವಾಸಿಸುತ್ತಿದ್ದು ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು  ಸರಕಾರದ ಜವಾಬ್ದಾರಿಯಾಗಿದೆ ಶಿವನಗರ ಗೌಳಿವಾಡ ಕಂದಾಯ ಗ್ರಾಮ ಘೋಷಣೆಗೆ  ಅರ್ಹವಾಗಿದ್ದು. ಗ್ರಾಮ ಸಭೆ ಹಾಗೂ ಗ್ರಾಮ ಅರಣ್ಯ ಹಕ್ಕು ಸಮಿತಿ ಸಭೆಗಳಲ್ಲಿ ಠರಾವು ಆದಂತೆ ತಕ್ಷಣವೇ ಉಪ ವಿಭಾಗ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಜನವಸತಿ ಪ್ರದೇಶವನ್ನು ಮಾತ್ರ ಕಂದಾಯ ಭೂಮಿಯನ್ನಾಗಿಸಲು ಅರಣ್ಯಇಲಾಖೆ ಅಧಿಕಾರಿಗಳು ಸಮ್ಮತಿಸಿದರು ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ತೊಂದರೆಯಾಗಿದ್ದು ತಕ್ಷಣವೆ ಸೋಲಾರ್ ಬೀದಿ ದೀಪ ಅಳವಡಿಸುವಂತೆ ಪಿ.ಡಿ.ಓ ಗೆ ಸೂಚಿಸಲಾಯಿತು ಇತೀಚೆಗೆ ಮಳೆಯಿಂದಾಗಿ ಶಾಲಾ ಗೋಡೆ ಕುಸಿದಿದ್ದು ಸದ್ಯ ಸ್ಥಳೀಯರೊಬ್ಬರ ಕಟ್ಟಡದಲ್ಲಿ ಮಕ್ಕಳ ಕಲಿಕೆ ಮುಂದುವರೆದಿದ್ದು  ಶೀರ್ಘವೇ ಶಾಲಾ ಕಟ್ಟಡ ದುರಸ್ತಿಗೆ ಕೈಗೊಳ್ಳಲಾಗುವುದೆಂದು ಬಿ.ಇ.ಓ ಸಭೆಗೆ ತಿಳಿಸಿದರು.

ರೇಣುಕಾನಗರದಲ್ಲಿ ರಸ್ತೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ನೀರಿನ ಟ್ಯಾಂಕ್‍ನ್ನು ಹಾಗೂ ಜಲಜೀವನ ಮಿಷನ್ ಮುಗಿಸಿ ನೀರು ಸರಬರಾಜಿಗೆ ತೊಂದರೆಯಾಗದಂತೆ  ಸೂಚಿಸಿದರು ಲಿಂಗನಕೊಪ್ಪ, ಮಡಿಕೆಕೊಪ್ಪ, ಕಿವುಡೇ ಬೆಲ್ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು  ಈಗಾಗಲೇ ಕ್ರಮ ಕೈಗೊಳ್ಳುತಿರುವುದಾಗಿ ಸಭೆಗೆ ತಿಳಿಸಲಾಯಿತು. ಅಂಬೋಲಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಮಸ್ಯೆ ನಿವಾರಣೆಗೆ ತಕ್ಷಣವೇ 13  ವಿದ್ಯುತ್ ಕಂಬಗಳನ್ನು ಅಳವಡಿಸುವಂತೆ ಸಚಿವರು ಹೆಸ್ಕಾಂ ಕಾರ್ಯನಿರ್ವಾಹಕ  ಅಭಿಯಂತ್ರರರಿಗೆ  ಸಭೆಯಲ್ಲಿ ದೂರವಾಣಿ ಮುಖಾಂತರ ಸೂಚಿಸಿದರು.

ಟಿ. ರಾಮಚಂದ್ರ ನಗರದಲ್ಲಿ ಬಸ್ ನಿಲ್ಲುಗಡೆ ಹಾಗೂ ಶಾಲಾ ದುರಸ್ತಿ ಕಾರ್ಯವನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಸಚಿವರು ಸೂಚಿಸಿದರು ಉಡವನಾಗಲಾವಿ ಹಾಗೂ ಹುಣಸಿ ಕುಮರಿ ಜನವಸತಿಗಳನ್ನು  ಕಂದಾಯ ಗ್ರಾಮ  ಪರಿವರ್ತನೆಗೆ ತಕ್ಷಣವೇ ಪ್ರಸ್ತಾವನೆಗಳನ್ನು ಪೂರ್ಣಗೊಳಿಸುವಂತೆ ಸಚಿವರು ಉಪವಿಭಾಗಾಧಿಕಾರಿ ಅಶೋಕ ತೇಲಿ ಅವರಿಗೆ ತಿಳಿಸಿದರು.

ಫಾರ್ಮಿಂಗ್ ಸೊಸೈಟಿ ಜಮೀನು ಸಾಗುವಳಿದಾರ ರೈತರ ಮಾಲೀಕತ್ವಕ್ಕೆ; ಕಲಘಟಗಿ, ಅಳ್ನಾವರ,  ಧಾರವಾಡ ತಾಲೂಕಿನಲ್ಲಿ  ಸರಕಾರಿ ಭೂಮಿಯನ್ನು ಗುತ್ತಿಗೆಗೆ ಪಡೆದು  ರೈತರಿಗೆ ಉಳುಮೆ ಮಾಡಲು  ಫಾರ್ಮಿಂಗ್ ಸೊಸೈಟಿಗಳನ್ನು ನೀಡಿದ್ದು ಜಮೀನನ್ನು ನಿಯಮಾನುಸಾರ ಸದ್ಯ ಸಾಗುವಳಿ ಮಾಡುತ್ತಿರುವ ರೈತರ ಹೆಸರಿಗೆ ಖಾತಾ ಮಾಡುವಂತೆ ಸಚಿವರು ಈ ಹಿಂದಿನ ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಅಶೋಕ ತೇಲಿ ಇವರಿಗೆ ಸೂಚಿಸಿದ್ದರು. ಸದ್ಯ ಫಾರ್ಮಿಂಗ್ ಸೊಸೈಟಿಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದ್ದು  ಸಾಗುವಳಿ ಮಾಡುತ್ತಿರುವ ರೈತರಿಗೆ ಜಮೀನು ಮಾಲಿಕತ್ವ ನೀಡುವ ಪ್ರಕ್ರಿಯೆ  ಆರಂಭಿಸಲಾಗುವುದೆಂದರು.

ಬೆಂಗಳೂರು-ಪುಣೆ ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಸೊಸೈಟಿ ಆಕ್ಟ್ ನಲ್ಲಿ ರೈತರಿಗೆ ನಮೂನೆ 57ರಲ್ಲಿ   ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ, ಅವುಗಳನ್ನೆಲ್ಲ ಪರಿಶೀಲಿಸಿ ಕ್ರಮ ಕೈಗೊಳ್ಳುವ ಲಾಗುವುದೆಂದರು ಸಭೆಯಲ್ಲಿ ಡಿ.ಎಫ್.ಓ  ಸೋನಲ್ ವೃಷ್ಣಿ, ಎ.ಎಸಿ.ಎಫ್  ಪರಿಮಳ ಹುಲಗಣ್ಣವರ, ಧಾರವಾಡ ತಹಶೀಲ್ದಾರ್ ದೊಡ್ಡಪ್ಪ ಹೂಗಾರ್ ಕಲಘಟಗಿ ತಾಲೂಕು ಪಂಚಾಯಿತಿ ಇ.ಓ ಪರಶುರಾಮ್ ಸಾವಂತ್.ಅಳ್ಳಾವರ ಇ.ಓ ಸಂತೋಷ ಕುಮಾರ್ ತಳಕಲ್, ಅಳ್ನಾವರ ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರ  ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

click me!