ಬೆಳಗಾವಿ-ಗೋವಾ ಸುಗಮ ಸಂಚಾರಕ್ಕೆ ಸಚಿವ ಜಾರಕಿಹೊಳಿ ಕ್ರಮ

Published : Feb 24, 2024, 12:00 AM IST
ಬೆಳಗಾವಿ-ಗೋವಾ ಸುಗಮ ಸಂಚಾರಕ್ಕೆ ಸಚಿವ ಜಾರಕಿಹೊಳಿ ಕ್ರಮ

ಸಾರಾಂಶ

ಕಣಕುಂಬಿ ಹತ್ತಿರ ಚೋರ್ಲಾ ರಸ್ತೆಯ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಲಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ. ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಬೆಳಗಾವಿ- ಗೋವಾ ರಸ್ತೆಗೆ ಈಗ ದುರಸ್ಥಿ ಭಾಗ್ಯ ಸಿಕ್ಕಿದೆ. ಗೋವಾಕ್ಕೆ ಹೋಗುವ ಪ್ರಯಾಣಿಕರು ಇನ್ಮುಂದೆ ಚಿಂತೆ ಮಾಡಬೇಕಿಲ್ಲ.

ಬೆಳಗಾವಿ(ಫೆ.24): ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ಹದಗೆಟ್ಟಿದ್ದು, ಈ ರಸ್ತೆಯ ಪರಿಸ್ಥಿತಿ ಖುದ್ದಾಗಿ ಪರಿಶೀಲಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ರಸ್ತೆ ದುರಸ್ಥಿಗೆ ತುರ್ತು ಕ್ರಮ ಕೈಗೊಂಡಿದ್ದಾರೆ.

ಇಂದು(ಶನಿವಾರ) ಮಧ್ಯಾಹ್ನ 1 ಗಂಟೆಗೆ ಕಣಕುಂಬಿ ಹತ್ತಿರ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಚೋರ್ಲಾ ರಸ್ತೆಯ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಬೆಳಗಾವಿ- ಗೋವಾ ರಸ್ತೆಗೆ ಈಗ ದುರಸ್ಥಿ ಭಾಗ್ಯ ಸಿಕ್ಕಿದೆ. ಗೋವಾಕ್ಕೆ ಹೋಗುವ ಪ್ರಯಾಣಿಕರು ಇನ್ಮುಂದೆ ಚಿಂತೆ ಮಾಡಬೇಕಿಲ್ಲ.

ಬೆಳಗಾವಿ ಎಥೆನಾಲ್‌ ಉತ್ಪಾದನೆಯ ಹಬ್‌ ಆಗಲಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಬೆಳಗಾವಿ – ಚೋರ್ಲಾ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಬೆಳಗಾವಿ – ರಾಮನಗರ – ಗೋವಾ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಬೆಳಗಾವಿಯಿಂದ ಗೋವಾಗೆ ಹೋಗುವ ಬಹುತೇಕ ಎಲ್ಲ ವಾಹನಗಳು ಚೋರ್ಲಾ ಮಾರ್ಗದಲ್ಲಿ ಓಡಾಡುತ್ತಿವೆ. ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ.

PREV
Read more Articles on
click me!

Recommended Stories

ಬಜೆಟ್‌ನ ಘೋಷಣೆಗಳೆಲ್ಲ ಮೇ ಅಂತ್ಯದೊಳಗೇ ಜಾರಿಯಾಗಬೇಕು: ಸಿಎಂ ವಾರ್ನಿಂಗ್!
Yogesh Gowda murder case : ಕೊಲೆ ದೋಷಿ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್; ಶಾಸಕತ್ವ ರದ್ದು!