ಮೆಟ್ರೋದಿಂದ ಕನ್ನಡ ನಿರ್ಲಕ್ಷ್ಯ: ಕ್ರಮಕ್ಕೆ ಸಚಿವ ಸುನಿಲ್ ಸೂಚನೆ

Kannadaprabha News   | Asianet News
Published : Sep 02, 2021, 03:34 PM IST
ಮೆಟ್ರೋದಿಂದ ಕನ್ನಡ ನಿರ್ಲಕ್ಷ್ಯ: ಕ್ರಮಕ್ಕೆ ಸಚಿವ ಸುನಿಲ್ ಸೂಚನೆ

ಸಾರಾಂಶ

*   ಕನ್ನಡ ಭಾಷೆಯ ಕಡೆಗಣನೆಗೆ ತೀವ್ರ ಟೀಕೆ *   ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ  *   ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳ ಕಡೆಗಣನೆ  

ಬೆಂಗಳೂರು(ಸೆ.02): ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ರೈಲು ಸಂಚಾರದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕಡೆಗಣನೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿರುವ ಬಿಎಂಆರ್‌ಸಿಎಲ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಸೂಚಿಸಿದ್ದಾರೆ. 

ಬುಧವಾರ ಈ ಕುರಿತು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳು ಕಡೆಗಣಿಸಿರುವುದನ್ನು ಸಹಿಸುವುದಿಲ್ಲ. ಸರ್ಕಾರ ಇದನ್ನುಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. 

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಇದಕ್ಕೆ ಸೂಕ್ತ ವಿವರಣೆ ನೀಡಬೇಕು ಎಂದು ಪತ್ರದಲ್ಲಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.
 

PREV
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!