ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು

Published : Nov 27, 2022, 12:36 PM IST
ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು

ಸಾರಾಂಶ

ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ನಡೆದ ಘಟನೆ 

ಬೀದರ್(ನ.27):  ಡಾ.ಬಿ.ಆರ್‌. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಎರಚಿದ ಘಟನೆ ಬೀದರ್ ಜಿಲ್ಲೆಯ   ಹುಮನಾಬಾದ್‌ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಗ್ರಾಮದ ಅಂಬೇಡ್ಕರ್ ವೃತದಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಘಟನೆ ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ. 

ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಕಿಡಿಗೇಡಿಗಳ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. 

ಬೀದರ್‌ ಉತ್ಸವಕ್ಕೆ ಗಾಯಕ ವಿಜಯಪ್ರಕಾಶ, ಸಂಜಿತ ಹೆಗಡೆ, ಮಂಗ್ಲಿ, ಕುಮಾರ ಸಾನು

ಘಟನೆ ಹಿನ್ನಲೆಯಲ್ಲಿ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪ್ರದೀಪ್ ಹಿರೇಮಠ ಭೇಟಿ ನೀಡಿ ಪ್ರತಿಭಟನಾ ನಿರತರ ಜೊತೆ ಮಾತುಕತೆ ನಡೆಸಿದ್ದಾರೆ. 
 

PREV
Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ