ಮುಸ್ಲಿಂ ಯುವಕನ ಶವ ಸಾಗಿಸಲು ಆ್ಯಂಬುಲೆನ್ಸ್‌ ಚಾಲಕರಾದ ರೇಣು

Kannadaprabha News   | Asianet News
Published : Jun 03, 2021, 07:22 AM ISTUpdated : Jun 03, 2021, 09:39 AM IST
ಮುಸ್ಲಿಂ ಯುವಕನ ಶವ ಸಾಗಿಸಲು ಆ್ಯಂಬುಲೆನ್ಸ್‌ ಚಾಲಕರಾದ ರೇಣು

ಸಾರಾಂಶ

ಮತ್ತೆ ಆಂಬುಲೆನ್ಸ್ ಚಾಲಕರಾದ ಶಾಸಕ ರೇಣುಕಾಚಾರ್ಯ ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಸಾಗಿಸಿ ಮಾನವೀಯತೆ ಸದಾ ಕೋವಿಡ್ ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೇಣು

ಹೊನ್ನಾಳಿ (ಜೂ.03): ಇತ್ತೀಚೆಗೆ ಆ್ಯಂಬುಲೆನ್ಸ್‌ ಚಾಲನೆ ಮಾಡಿ ಸುದ್ದಿಯಾಗಿದ್ದ ಶಾಸಕ ರೇಣುಕಾಚಾರ್ಯ ಅವರು ಇದೀಗ ಕೊರೋನಾ ಸೋಂಕಿನಿಂದ ಮೃತಪಟ್ಟಮುಸ್ಲಿಂ ಯುವಕನ ಮೃತದೇಹ ಹೊತ್ತ ಆ್ಯಂಬುಲೆನ್ಸ್‌ ಅನ್ನು ಖುದ್ದು ಚಲಾಯಿಸಿದ್ದಾರೆ.

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

ಕೊರೊನಾದಿಂದ ಮೃತಪಟ್ಟ34 ವರ್ಷದ ಯುವಕನ ಮೃತದೇಹ ಹೊತ್ತ ಆ್ಯಂಬುಲೆನ್ಸ್‌ ಅನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಯಿಂದ ನ್ಯಾಮತಿಯ ಖಬರಸ್ಥಾನದವರೆಗೆ (ಸ್ಮಶಾನ) ಚಾಲನೆ ಮಾಡಿಕೊಂಡು ಹೋಗಿ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿ, ಸಾಂತ್ವನ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕರು, ನನಗೆ ಅಲ್ಲಾ, ಈಶ್ವರ ಎಲ್ಲಾ ಒಂದೇ. ನಾನು ಅವಳಿ ತಾಲೂಕಿನ ಕಾವಲುಗಾರ. ಜನರನ್ನು ಕಾಯುವುದು ನನ್ನ ಕರ್ತವ್ಯ, ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!