'ಅಂದು ಲಸಿಕೆ ಅಪಪ್ರಚಾರ-ಇಂದು ಮೋದಿ ವಿರುದ್ಧ ಟೀಕೆ ಕೈ ನಾಯಕರ ಕೆಲಸ'

Published : May 19, 2021, 04:22 PM IST
'ಅಂದು ಲಸಿಕೆ ಅಪಪ್ರಚಾರ-ಇಂದು ಮೋದಿ ವಿರುದ್ಧ ಟೀಕೆ ಕೈ ನಾಯಕರ ಕೆಲಸ'

ಸಾರಾಂಶ

ಕಾಂಗ್ರೆಸ್ ನವರು ಲಸಿಕೆ ಬಗ್ಗೆ ಬಹಳ ಅಪಪ್ರಚಾರ ಮಾಡಿದ್ದರು ಪ್ರತಿದಿನ ರಾಹುಲ್ ಗಾಂಧಿಗೆ ಮೋದಿನಾ ಟೀಕಾ ಮಾಡೋದೆ ಕೆಲಸ ಕೈ ನಾಯಕರ ವಿರುದ್ಧ ಶಾಸಕ ಚರಂತಿಮಠ ವಾಗ್ದಾಳಿ

 ಬಾಗಲಕೋಟೆ (ಮೇ.19): ಅಂದು ಕಾಂಗ್ರೆಸ್‌ನವರು ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ದು, ಈಗ ರಾಹುಲ್ ಗಾಂಧಿಗೆ ದಿನವು ಮೋದಿ ಟೀಕಿಸುವುದೇ ದೊಡ್ಡ ಕೆಲಸವಾಗಿದೆ ಎಂದು ಶಾಸಕ ವೀರಣ ಚರಂತಿಮಠ ಹೇಳಿದರು. 

ಬಾಗಲಕೋಟೆಯಲ್ಲಿಂದು ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ರಾಹುಲ್ ನಿತ್ಯವೂ ಮೋದಿ ಟೀಕಿಸುತ್ತಿದ್ದು, ಅವರಿಗಿನ್ನೂ ಮೆಚುರಿಟಿ ಬಂದಿಲ್ಲವೆಂದು ಹೇಳಿದರು. 

ರಾಹುಲ್ ಗಾಂಧಿ ಅಮ್ಮನ ತವರೂರು ಇಟಲಿಯಲ್ಲಿ ಬರೀ 6 ಕೋಟಿ ಜನಸಂಖ್ಯೆ ಇದೆ. ಅಲ್ಲಿ ಕೋವಿಡ್ ನಿಂದ ಹಾದಿ ಬೀದಿಯಲ್ಲಿ ಹೆಣಗಳು ಬಿದ್ದಿದ್ದು ಎಲ್ಲರು ನೋಡಿದ್ದಾರೆ. 130 ಕೋಟಿ ಜನಸಂಖ್ಯೆ ಇರೋ ನಮ್ಮ ದೇಶದ ಬಗ್ಗೆ ಮಾತನಾಡುತ್ತಾರೆಂದು ಅಸಮಾಧಾನ ಹೊರಹಾಕಿದರು.

ಕೆಲಸ ಮಾಡಿ, ಇಲ್ಲದಿದ್ದರೆ ರಾಜೀನಾಮೆ ಕೊಡಿ : ಸಿಎಂ ವಿರುದ್ಧ ಯತ್ನಾಳ್ ಗರಂ

ಮೋದಿ ಅವರು ವ್ಯಾಕ್ಸಿನ್ ತಂದರೆ ನಾವೇ ನಮ್ಮ ಗಾಡಿಯಲ್ಲಿ ವ್ಯಾಕ್ಸಿನ್  ಹಾಕಿಸಿಕೊಳ್ಳಲು ಜನರನ್ನ ಕರೆತಂದಿದ್ದೆವೆ. ಆಗಲೂ ಕಾಂಗ್ರೆಸ್ ನವರು ಮೋದಿ ವ್ಯಾಕ್ಸಿನ್, ಬಿಜೆಪಿ ವ್ಯಾಕ್ಸಿನ್ ಎಂದು ಅಪಪ್ರಚಾರ ಮಾಡಿದ್ದರು.  ವಿಶ್ವದ 90 ಸಣ್ಣ ಸಣ್ಣ ರಾಷ್ಟ್ರಗಳಿಗೆ ಮೋದಿ ವ್ಯಾಕ್ಸಿನ್ ನೀಡಿದ್ದರು, ಆಗ ನಮ್ಮಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇತ್ತು ಎಂದು ಚರಂತಿಮಠ ಸಮರ್ಥನೆ ನೀಡಿದರು.

ಈಗ ನಮ್ಮ ದೇಶಕ್ಕೆ ಬೇರೆ ಬೇರೆ ರಾಷ್ಟ್ರಗಳು ಸಹಾಯಹಸ್ತ ಚಾಚಿವೆ. ಮೋದಿ ಅವರು ಜುಲೈ-ಅಕ್ಟೋಬರ್ ಒಳಗೆ ಎಲ್ಲರಿಗೂ ಲಸಿಕೆ ತಲುಪುವಂತೆ ನಿರ್ಣಯ ಕೈಗೊಂಡಿದ್ದಾರೆ ಎಂದು ಬಾಗಲಕೋಟೆಯಲ್ಲಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

BCCI Centre of Excellence: ಬೆಂಗಳೂರಲ್ಲಿದೆ ಭಾರತದ ಕ್ರಿಕೆಟ್‌ ಫ್ಯಾಕ್ಟ್ರಿ; ₹500 ಕೋಟಿ ವೆಚ್ಚ
ಬೆಂಗಳೂರು ವಾಹನ ಸವಾರರಿಗೆ ಅಲರ್ಟ್; ಅಕ್ಟೋಬರ್‌ನಿಂದ ಜನವರಿವರೆಗೂ ಹೆಚ್ಚಾಗಲಿದೆ ಟ್ರಾಫಿಕ್‌ ತಲೆನೋವು, ಇಲ್ಲಿದೆ ಕಾರಣ!