Mandya Congress ತಲ್ಲಣ : SM ಕೃಷ್ಣ ಕೈಯಲ್ಲಿ ಕಾಂಗ್ರೆಸ್ ಅಭ್ಯರ್ಥಿ

By Kannadaprabha NewsFirst Published Nov 20, 2021, 3:14 PM IST
Highlights
  •  ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳು ಅಂತಿಮಗೊಳ್ಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸು
  • ಅಂತಿಮ ಘಳಿಗೆಯಲ್ಲಿ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯ ಬದಲಾವಣೆ ಅಚ್ಚರಿಯ ಜೊತೆಗೆ ಅಸಮಾಧಾನ ಸ್ಫೋಟಕ್ಕೂ ಕಾರಣ

ವರದಿ - ಮಂಡ್ಯ ಮಂಜುನಾಥ 

 ಮಂಡ್ಯ (ನ.20):  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ (MLC Election) ನಡೆಯುವ ಚುನಾವಣೆಗೆ ಅಭ್ಯರ್ಥಿಗಳು ಅಂತಿಮಗೊಳ್ಳುತ್ತಿದ್ದಂತೆಯೇ ಚಟುವಟಿಕೆಗಳು ಬಿರುಸುಗೊಂಡಿದ್ದು, ಅಂತಿಮ ಘಳಿಗೆಯಲ್ಲಿ ಕಾಂಗ್ರೆಸ್ (congress) ಅಭ್ಯರ್ಥಿಯ ಬದಲಾವಣೆ ಅಚ್ಚರಿಯ ಜೊತೆಗೆ ಅಸಮಾಧಾನವನ್ನು ಸ್ಫೋಟಿಸಿದೆ. ನಿರೀಕ್ಷೆಯಂತೆ ಜೆಡಿಎಸ್ (JDS) ಎನ್. ಅಪ್ಪಾಜಿ ಗೌಡ (Appaji Gowda) ಅವರನ್ನು ಅಭ್ಯರ್ಥಿಯಾಗಿ ಅಂತಿಮಗೊಳಿಸಿದ್ದು, ಬಿಜೆಪಿಯಲ್ಲೂ (BJP) ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ (BS Yediyurappa) ಸಂಬಂಧಿ ಬೂಕಹಳ್ಳಿ ಮಂಜು ಅವರಿಗೆ ಟಿಕೆಟ್ ನೀಡುವ ಸ್ಪಷ್ಟ ಸಾಧ್ಯತೆ ವ್ಯಕ್ತವಾಗಿದೆ. 

ಆದರೆ, ಕಾಂಗ್ರೆಸ್‌ನ ದಿಢೀರ್ ಬದಲಾವಣೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ವಿಧಾನ ಪರಿಷತ್ ಚುನಾವಣೆ ಪೂರ್ವ ಸಿದ್ಧತೆ ಆರಂಭಗೊಂಡ ದಿನದಿಂದಲೂ ಮಾಜಿ ಶಾಸಕ ಬಿ.ರಾಮಕೃಷ್ಣ (B Ramakrishna) ಅವರ ಹೆಸರು ಪ್ರಬಲವಾಗಿ ಕೇಳಿಬಂದಿದ್ದು, ಅಂತಿಮ ಹಂತದಲ್ಲಿಯೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ (N cheluvarayaswamy) ಪ್ರಭಾವದ ಕಾರಣದಿಂದಾಗಿ ಬಿ.ರಾಮಕೃಷ್ಣ ಸ್ಪರ್ಧೆಗಿಳಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದ್ದವು.

 ಮೇಲ್ಮಟ್ಟದಲ್ಲಿ ಉಂಟಾದ ರಾಜಕೀಯ ಕ್ಷಿಪ್ರ ಬೆಳವಣಿಗೆಯಿಂದಾಗಿ ಸದ್ಯ ಬಿಜೆಪಿ (BJP) ಸರ್ಕಾರದಲ್ಲಿ ಸಹಕಾರ ಸಚಿವರಾಗಿರುವ ಎಸ್.ಟಿ. ಸೋಮಶೇಖರ್ (ST Somashekhar) ಅವರ ವಿಶೇ ಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮದ್ದೂರು ಮೂಲದ ದಿನೇಶ್ ಗೂಳಿಗೌಡ (Dinesh Guligowda) ಅವರಿಗೆ ಟಿಕೆಟ್ ಅಂತಿಮ ಗೊಳಿಸುವ ಪ್ರಕ್ರಿಯೆಗಳು ಬಹುತೇಕ ಪೂರ್ಣ ಗೊಂಡಿದ್ದು ಇದು ಸ್ಥಳೀಯ ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುವ ಚುನಾವಣೆಗಳಲ್ಲಿ ಸ್ಥಳೀಯ ಮುಖಂಡರ ಅಭಿಪ್ರಾಯದ ಮೇರೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಪ್ರದಾಯ ಬೆಳೆದು ಬಂದಿದೆ. 

ಆದರೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹೈ ಕಮಾಂಡ್ ಮಟ್ಟದಿಂದಲೇ ಕ್ಷೇತ್ರಕ್ಕಿಳಿಸುವ ಕೆಲಸ ಮಾಡಿದ್ದು, ಅದರಲ್ಲೂ ವಿಶೇಷವಾಗಿ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ದಿನೇಶ್ ಗೂಳಿಗೌಡ ಅವರಿಗೆ ಅವಕಾಶ ಕಲ್ಪಿಸಿರುವುದು ಸಹಜವಾಗಿಯೇ ಸ್ಥಳೀಯ ಕಾಂಗ್ರೆಸ್ಸಿಗರ ಸಿಟ್ಟಿಗೆ ಕಾರಣವಾಗಿದೆ. 

ಈ ಹಿಂದೆ ಡಿಸಿಸಿ ಬ್ಯಾಂಕ್‌ಗೆ (DCC Bank) ತಮ್ಮ ಆಪ್ತರೊಬ್ಬರನ್ನು ಅಧ್ಯಕ್ಷರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ (SM Krishna) ಈಗ ಮತ್ತೊಮ್ಮೆ ತಮ್ಮ ಬೆಂಬಲಿಗ ದಿನೇಶ್ ಗೂಳಿಗೌಡ ಅವರನ್ನು ಮೇಲ್ಮನೆಗೆ ಕಳುಹಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತಮ್ಮ ರಾಜಕೀಯ ಚಾಣಾಕ್ಷತನದಿಂದಲೇ ಸದಾ ಅಧಿಕಾರವನ್ನು ಅನುಭವಿ ಸುತ್ತಾ ಬಂದಿರುವ ಎಸ್.ಎಂ.ಕೃಷ್ಣ ತನ್ನ ಶಿಷ್ಯ ಡಿ.ಕೆ.ಶಿವಕುಮಾರ್ (DK Shivakumar) ಮೂಲಕ ದಿನೇಶ್ ಗೂಳಿಗೌಡ ಅವರನ್ನು ಕಾಂಗ್ರೆಸ್ ನಿಂದ ಅಭ್ಯರ್ಥಿಯನ್ನಾಗಿಸುವಲ್ಲಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರು ಕಾಣಿಕೆ ನೀಡುವ ಭರದಲ್ಲಿ ಜಿಲ್ಲೆಯ ಕಾಂಗ್ರೆಸ್ಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದನ್ನು ಮರೆತು ಬಲವಂತವಾಗಿ ಅಭ್ಯರ್ಥಿ ಹೇರಿಕೆಯನ್ನು ಮಾಡಿದ್ದು ಇದರ ವಿರುದ್ಧ ಸ್ಥಳೀಯ ಕಾಂಗ್ರೆಸ್ಸಿಗರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸದಿದ್ದರೂ ಮುಕ್ತ ಮನಸ್ಸಿನಿಂದ ಕಾಂಗ್ರೆಸ್ ಪರವಾಗಿ ಚುನಾವಣೆ ನಡೆಸುವ ಆಸಕ್ತಿಯನ್ನು ತೋರುತ್ತಿಲ್ಲ ಎಂದು ತಿಳಿದುಬಂದಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಿ. ರಾಮಕೃಷ್ಣ ಅವರ ಗೆಲುವಿಗೆ ಸ್ಥಳೀಯ ಕಾಂಗ್ರೆಸ್ಸಿಗರು ಪೂರ್ವ ತಯಾರಿ ನಡೆಸಿ ದ್ದರು. ಜೆಡಿಎಸ್‌ನ ಅಸಮಾಧಾನಿತ ನಾಯ ಕರನ್ನು ರಹಸ್ಯವಾಗಿ ಒಗ್ಗೂಡಿಸಿಕೊಂಡು ಕಾಂಗ್ರೆಸ್ಸಿಗೆ ಗೆಲುವ ತರುವ ಪ್ರಕ್ರಿಯೆಯನ್ನು ನಡೆಸುತ್ತಿದ್ದ ಹೊತ್ತಿನಲ್ಲೇ ಡಿ.ಕೆ.ಶಿವ ಕುಮಾರ್ ಅವರ ದಿಢೀರ್ ನಿಲುವು ಕಾಂಗ್ರೆಸ್ ವಲಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ. 

ಎಸ್.ಎಂ.ಕೃಷ್ಣ (CM Krishna) ಅವರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ದಿನೇಶ್ ಗೂಳಿಗೌಡ ಅಂದು ಡಾ.ಜಿ.ಪರಮೇಶ್ವರ್ ಅವರ ವಿಶೇಷಾಧಿ ಕಾರಿಯಾಗಿದ್ದರು. ನಂತರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಒಡನಾಟದಲ್ಲಿ ಗುರುತಿಸಿಕೊಂಡು ಅವರು ಬಿಜೆಪಿ ಸೇರಿ ಸಚಿವರಾದ ಬಳಿಕ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 

2023ರ ಚುನಾವಣೆ ಹೊತ್ತಿಗೆ ಬಿಜೆಪಿಗೆ ಪರ್ಯಾಯವಾಗಿ ಕಾಂಗ್ರೆಸ್ಸನ್ನು ಅಧಿ ಕಾರಕ್ಕೆ ತರುವ ಉತ್ಸಾಹದ ಮಾತುಗಳನ್ನಾ ಡುವ ಕಾಂಗ್ರೆಸ್‌ನ ರಾಜ್ಯ ಮುಖಂಡರು ಮಾತನಾಡುವುದು ಒಂದೆಡೆ ಯಾದರೆ, ಮಂಡ್ಯ ಸ್ಥಳೀಯ ಸಂಸ್ಥೆ ಕ್ಷೇತ್ರಗಳಿಂದ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಸ್ಥಳೀಯವಾಗಿ ಕಾಂಗ್ರೆಸ್‌ನ ಪೂರ್ಣ ಒಡನಾಟ ವಿಲ್ಲದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿ ರುವುದು ನಿಷ್ಠಾವಂತರ ಟೀಕೆಗೆ ಗುರಿಯಾಗಿದೆ. 

click me!