ಉ. ಕನ್ನಡದಲ್ಲಿ ಮತ್ತೆ ಪ್ರವಾಹ: ವರುಣ ಸಾಕು ನಿಲ್ಲಿಸು ನಿನ್ನ ಪ್ರತಾಪ!

Published : Sep 05, 2019, 02:39 PM ISTUpdated : Sep 05, 2019, 02:50 PM IST
ಉ. ಕನ್ನಡದಲ್ಲಿ ಮತ್ತೆ ಪ್ರವಾಹ: ವರುಣ ಸಾಕು ನಿಲ್ಲಿಸು ನಿನ್ನ ಪ್ರತಾಪ!

ಸಾರಾಂಶ

ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಈಗ ಉತ್ತರ ಕನ್ನಡದಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ. ಈಗಾಗಲೇ ಪ್ರವಾಹದಿಂದ ತತ್ತರಿಸಿರುವ ಉತ್ತರ ಕನ್ನಡಲ್ಲಿ ಮತ್ತೊಮ್ಮೆ ಶರಾವತಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಉತ್ತರ ಕನ್ನಡ(ಸೆ.05): ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಈಗ ಉತ್ತರ ಕನ್ನಡದಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ. ಈಗಾಗಲೇ ಪ್ರವಾಹದಿಂದ ತತ್ತರಿಸಿರುವ ಉತ್ತರ ಕನ್ನಡಲ್ಲಿ ಮತ್ತೊಮ್ಮೆ ಶರಾವತಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಹೊನ್ನಾವರದಲ್ಲಿ ಶರಾವತಿ ನದಿ ಪ್ರವಾಹದಿಂದಾಗಿ 30ಮನೆಗಳಿಗೆ ನೀರು ನುಗ್ಗಿದ್ದು ಕುಟುಂಬಗಳನ್ನು ದೋಣಿಯ ಸಹಾಯದಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹದಿಂದ ಮನೆಗಳು ಮುಳುಗಡೆಯಾಗಿದ್ದು ಜನ ಕಂಗಾಲಾಗಿದ್ದಾರೆ.

ತಿಥಿಗೆ ಪುರೋಹಿತರನ್ನು ಬುಟ್ಟಿಯಲ್ಲೇ ಹೊತ್ತು ತಂದರು !

ಒಟ್ಟು ನಾಲ್ಕು ಕಡೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು 130 ಜನರು ಆಶ್ರಯ ಪಡೆದಿದ್ದಾರೆ. ಕೊಡಗು ಭಾಗದಲ್ಲಿಯೂ ನೇತ್ರಾವತಿ ನದಿ ನೀರಿನ ಪ್ರವಾಹ ಹೆಚ್ಚಿದ್ದು ಅಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ.

PREV
click me!

Recommended Stories

ಕೈ ಪಾಳಯದಲ್ಲೀಗ ಉಪಸಮರ ಲಾಭ, ನಷ್ಟದ ಲೆಕ್ಕಾಚಾರ ಶುರು - ಸಿದ್ದುಗೆ ಬಾಗಲಕೋಟೆ, ಡಿಕೆಶಿಗೆ ದಾವಣಗೆರೆ ಮಹತ್ವದ್ದು ಯಾಕೆ ಗೊತ್ತಾ?
ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳು ಯಾರ ಮಡಿಲಿಗೆ? - ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಹಣಾಹಣಿ, ಬೆಳಗ್ಗೆ 8ರಿಂದ ಎಣಿಕೆ, 12ರ ವೇಳೆಗೆ ರಿಸಲ್ಟ್‌