ಉ. ಕನ್ನಡದಲ್ಲಿ ಮತ್ತೆ ಪ್ರವಾಹ: ವರುಣ ಸಾಕು ನಿಲ್ಲಿಸು ನಿನ್ನ ಪ್ರತಾಪ!

Published : Sep 05, 2019, 02:39 PM ISTUpdated : Sep 05, 2019, 02:50 PM IST
ಉ. ಕನ್ನಡದಲ್ಲಿ ಮತ್ತೆ ಪ್ರವಾಹ: ವರುಣ ಸಾಕು ನಿಲ್ಲಿಸು ನಿನ್ನ ಪ್ರತಾಪ!

ಸಾರಾಂಶ

ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಈಗ ಉತ್ತರ ಕನ್ನಡದಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ. ಈಗಾಗಲೇ ಪ್ರವಾಹದಿಂದ ತತ್ತರಿಸಿರುವ ಉತ್ತರ ಕನ್ನಡಲ್ಲಿ ಮತ್ತೊಮ್ಮೆ ಶರಾವತಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಉತ್ತರ ಕನ್ನಡ(ಸೆ.05): ಕರಾವಳಿ, ಮಲೆನಾಡು, ಕೊಡಗಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಈಗ ಉತ್ತರ ಕನ್ನಡದಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ. ಈಗಾಗಲೇ ಪ್ರವಾಹದಿಂದ ತತ್ತರಿಸಿರುವ ಉತ್ತರ ಕನ್ನಡಲ್ಲಿ ಮತ್ತೊಮ್ಮೆ ಶರಾವತಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಹೊನ್ನಾವರದಲ್ಲಿ ಶರಾವತಿ ನದಿ ಪ್ರವಾಹದಿಂದಾಗಿ 30ಮನೆಗಳಿಗೆ ನೀರು ನುಗ್ಗಿದ್ದು ಕುಟುಂಬಗಳನ್ನು ದೋಣಿಯ ಸಹಾಯದಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹದಿಂದ ಮನೆಗಳು ಮುಳುಗಡೆಯಾಗಿದ್ದು ಜನ ಕಂಗಾಲಾಗಿದ್ದಾರೆ.

ತಿಥಿಗೆ ಪುರೋಹಿತರನ್ನು ಬುಟ್ಟಿಯಲ್ಲೇ ಹೊತ್ತು ತಂದರು !

ಒಟ್ಟು ನಾಲ್ಕು ಕಡೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು 130 ಜನರು ಆಶ್ರಯ ಪಡೆದಿದ್ದಾರೆ. ಕೊಡಗು ಭಾಗದಲ್ಲಿಯೂ ನೇತ್ರಾವತಿ ನದಿ ನೀರಿನ ಪ್ರವಾಹ ಹೆಚ್ಚಿದ್ದು ಅಲ್ಲಿಯೂ ಪ್ರವಾಹ ಭೀತಿ ಉಂಟಾಗಿದೆ.

PREV
click me!

Recommended Stories

ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕೆ ಮಂಡ್ಯದ ಮೂವರು ವಿದ್ಯಾರ್ಥಿಗಳು ಆಯ್ಕೆ
Naxal: ನಕ್ಸಲ್ಸರಿಗೆ ₹92 ಕೋಟಿ ದೇಣಿಗೆ: ರಾಜ್ಯದ ಈ ನಾಲ್ವರು ಸೇರಿ 7 ಮಂದಿ ವಿರುದ್ಧ FIR!