ಮೈಸೂರು - ಮಂಗಳೂರು ನಡುವೆ ರೈಲು ಸೇವೆ..?

Kannadaprabha News   | Asianet News
Published : Feb 06, 2020, 01:01 PM IST
ಮೈಸೂರು - ಮಂಗಳೂರು ನಡುವೆ ರೈಲು ಸೇವೆ..?

ಸಾರಾಂಶ

ಬೆಂಗಳೂರು ಮತ್ತು ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ವಾರದಲ್ಲಿ ನಾಲ್ಕು ದಿನ ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕು ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ರೈಲ್ವೆ ಸಚಿವ ಸುರೇಶ್‌ ಅಂಗಡಿ ಅವರನ್ನು ಕೋರಿದ್ದಾರೆ.

ಮೈಸೂರು(ಫೆ.06): ಬೆಂಗಳೂರು ಮತ್ತು ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ವಾರದಲ್ಲಿ ನಾಲ್ಕು ದಿನ ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕು ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ರೈಲ್ವೆ ಸಚಿವ ಸುರೇಶ್‌ ಅಂಗಡಿ ಅವರನ್ನು ಕೋರಿದರು.

ಬೆಳಗಿನ ವೇಳೆ ಮೈಸೂರು- ಮಂಗಳೂರು ರೈಲು ಸಂಚಾರಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಈ ರೈಲು ಮೈಸೂರು ಮಾರ್ಗವಾಗಿ ಸಂಚರಿಸಿದರೆ ಅನುಕೂಲವಾಗಲಿದೆ. ಈ ಸಂಬಂಧ ರೈಲ್ವೆ ವಲಯವು ಸರ್ವೇ ನಡೆಸಿದೆ.

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ಬಸ್‌ಗಳು ಚಾರ್ಮಾಡಿ ಘಾಟ್‌ ಮೂಲಕ ಸಂಚರಿಸುವುದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ಅನಾನುಕೂಲವಾಗಿದೆ. ಈ ರೈಲು ಮಾರ್ಗಕ್ಕೆ ಅನುಮತಿ ನೀಡುವುದರಿಂದ ರಾಜ್ಯದ ಎರಡು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ ಎಂದು ಅವರು ಕೋರಿದ್ದಾರೆ.

ಅಂತೆಯೇ ಮೈಸೂರಿನ ರೈಲ್ವೆ ಮ್ಯೂಸಿಯಮ್‌ ನವೀಕರಣ ಮತ್ತು ಅಭಿವೃದ್ಧಿಗೆ ಅಗತ್ಯವಿರುವ . 5 ಕೋಟಿ ನೀಡಲು ಸೂಚನೆ ನೀಡಿದ ಸಚಿವ ಸುರೇಶ್‌ ಅಂಗಡಿ ಅವರಿಗೆ ಧನ್ಯವಾದ ಅರ್ಪಿಸಿದರು.

PREV
click me!

Recommended Stories

ಹೊಸ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ, ದೆಹಲಿಗೆ ಬನ್ನಿ ಎಂದ ಹೆಚ್‌ಡಿಕೆ, ರೈತರಿಗೆ ಸಿಗುವುದೇ ನ್ಯಾಯ?
ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ