ಮೈಸೂರು - ಮಂಗಳೂರು ನಡುವೆ ರೈಲು ಸೇವೆ..?

Published : Feb 06, 2020, 01:01 PM IST
ಮೈಸೂರು - ಮಂಗಳೂರು ನಡುವೆ ರೈಲು ಸೇವೆ..?

ಸಾರಾಂಶ

ಬೆಂಗಳೂರು ಮತ್ತು ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ವಾರದಲ್ಲಿ ನಾಲ್ಕು ದಿನ ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕು ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ರೈಲ್ವೆ ಸಚಿವ ಸುರೇಶ್‌ ಅಂಗಡಿ ಅವರನ್ನು ಕೋರಿದ್ದಾರೆ.

ಮೈಸೂರು(ಫೆ.06): ಬೆಂಗಳೂರು ಮತ್ತು ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ವಾರದಲ್ಲಿ ನಾಲ್ಕು ದಿನ ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕು ಎಂದು ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ರೈಲ್ವೆ ಸಚಿವ ಸುರೇಶ್‌ ಅಂಗಡಿ ಅವರನ್ನು ಕೋರಿದರು.

ಬೆಳಗಿನ ವೇಳೆ ಮೈಸೂರು- ಮಂಗಳೂರು ರೈಲು ಸಂಚಾರಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಈ ರೈಲು ಮೈಸೂರು ಮಾರ್ಗವಾಗಿ ಸಂಚರಿಸಿದರೆ ಅನುಕೂಲವಾಗಲಿದೆ. ಈ ಸಂಬಂಧ ರೈಲ್ವೆ ವಲಯವು ಸರ್ವೇ ನಡೆಸಿದೆ.

ದಾರಿ ತಪ್ಪಿ ಬಂದ ಪುಟ್ಟ ಆನೆ ಮರಿಯ ಆಕ್ರಂದನ..! ಅಮ್ಮನಿಗಾಗಿ ಅಳು

ಬಸ್‌ಗಳು ಚಾರ್ಮಾಡಿ ಘಾಟ್‌ ಮೂಲಕ ಸಂಚರಿಸುವುದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ಅನಾನುಕೂಲವಾಗಿದೆ. ಈ ರೈಲು ಮಾರ್ಗಕ್ಕೆ ಅನುಮತಿ ನೀಡುವುದರಿಂದ ರಾಜ್ಯದ ಎರಡು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ ಎಂದು ಅವರು ಕೋರಿದ್ದಾರೆ.

ಅಂತೆಯೇ ಮೈಸೂರಿನ ರೈಲ್ವೆ ಮ್ಯೂಸಿಯಮ್‌ ನವೀಕರಣ ಮತ್ತು ಅಭಿವೃದ್ಧಿಗೆ ಅಗತ್ಯವಿರುವ . 5 ಕೋಟಿ ನೀಡಲು ಸೂಚನೆ ನೀಡಿದ ಸಚಿವ ಸುರೇಶ್‌ ಅಂಗಡಿ ಅವರಿಗೆ ಧನ್ಯವಾದ ಅರ್ಪಿಸಿದರು.

PREV
click me!

Recommended Stories

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಇಲ್ಲ: ಬಿಜೆಪಿ ಆರೋಪಕ್ಕೆ ಸಚಿವ ನರೇಂದ್ರಸ್ವಾಮಿ ತಿರುಗೇಟು
ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!