ನಮಾಜ್ ಬಿಟ್ಟು ಬಂದು ಕೊರೋನಾ ಬಲಿ ಪಡೆದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

Suvarna News   | Asianet News
Published : Sep 20, 2020, 03:35 PM ISTUpdated : Sep 20, 2020, 03:49 PM IST
ನಮಾಜ್ ಬಿಟ್ಟು ಬಂದು ಕೊರೋನಾ ಬಲಿ ಪಡೆದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

ಸಾರಾಂಶ

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಹಿಂದೂ ಯುವಕನ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಹಾಸನ (ಸೆ.20) : ಕೊರೋನಾ ಮಹಾಮಾರಿಯಿಂದ ಮೃತಪಟ್ಟಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮುಸ್ಲಿಂ ಯುವಕರು ನೆರವೇರಿಸಿದ್ದಾರೆ.

ನಮಾಜ್ ಬಿಟ್ಟು ಬಂದು ಹಿಂದೂ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 

ಆಚಂಗಿ ಗ್ರಾಮದ ಮೋಹಿದ್ದೀನ್, ಮಸೀದಿ ಸಮಿತಿ ಕಾರ್ಯಕರ್ತರಾದ ಸಮೀರ್, ಆರೀಫ್, ಅಜೀಜ್, ಅಬ್ದುಲ್ ಮಜೀದ್, ಮಹಾಝ್, ಹಮೀದ್ ಕುಡುಗರಹಳ್ಳಿ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಧಾರ್ಮಿಕ ಸಾಮರಸ್ಯದ ಮೂಲಕ ಮಾನವೀಯತೆ ಮೆರೆದಿದ್ದಾರೆ. 

ಇದನ್ನೂ ಓದಿ: ಯಾದಗಿರಿ: ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಸಂಸ್ಕಾರ

ಹಾಸನದ ಚಂಪಕನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. ಮುಸ್ಲಿಂ ಯುವಕರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.  

"

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC