ನನ್ನ ಉದ್ದೇಶ ಮಂತ್ರಿಗಿರಿ ಅಲ್ಲ : ವಿಜಯೇಂದ್ರ

Kannadaprabha News   | Asianet News
Published : Aug 17, 2021, 08:59 AM ISTUpdated : Aug 17, 2021, 09:00 AM IST
ನನ್ನ ಉದ್ದೇಶ ಮಂತ್ರಿಗಿರಿ ಅಲ್ಲ : ವಿಜಯೇಂದ್ರ

ಸಾರಾಂಶ

ಮಂತ್ರಿ ಆಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವ ಪ್ರಶ್ನೆ ಇಲ್ಲ  ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಷ್ಟೇ ನಮ್ಮ ಕೆಲಸ 

ಶಿವಮೊಗ್ಗ (ಆ.17): ಮಂತ್ರಿ ಆಗಬೇಕು, ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು ಎನ್ನುವ ಪ್ರಶ್ನೆ ಇಲ್ಲ. ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಷ್ಟೇ ನಮ್ಮ ಕೆಲಸ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

 ಶಿವಮೊಗ್ಗದ ರವೀಂದ್ರ ನಗರ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ಸ್ನೇಹಿತರು ಮತ್ತು ಅಭಿಮಾನಿಗಳು ಏರ್ಪಡಿಸಿದ್ದ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ: ಬಿ ವೈ ವಿಜಯೇಂದ್ರ

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಹಿಂದೆ ರಾಜ್ಯದಲ್ಲಿ ಹಲವಾರು ಹೋರಾಟ ನಡೆಸಿದ್ದಾರೆ. ರಾಜ್ಯದಲ್ಲಿ ತಾವು ಅಧಿಕಾರ ನಡೆಸಬೇಕು, ಮಂತ್ರಿ ಆಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶ ಅವರದಾಗಿತ್ತು. ಅದೇ ರೀತಿ ನಾವು ಕೂಡ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಉದ್ದೇಶದಿಂದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇವೆ ಎಂದರು.

PREV
click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?