ಪ್ರಭಾವಿ ಕೈ ಮುಖಂಡಗೆ ಬಿಜೆಪಿ ಆಹ್ವಾನ : ನಳಿನ್‌ರಿಂದ ಸೀಕ್ರೇಟ್ ಟಾಕ್?

Kannadaprabha News   | Asianet News
Published : Nov 16, 2020, 03:13 PM IST
ಪ್ರಭಾವಿ ಕೈ ಮುಖಂಡಗೆ ಬಿಜೆಪಿ ಆಹ್ವಾನ : ನಳಿನ್‌ರಿಂದ ಸೀಕ್ರೇಟ್ ಟಾಕ್?

ಸಾರಾಂಶ

ಪ್ರಭಾವಿ ಕಾಂಗ್ರೆಸ್ ಮುಖಂಡಗೆ ಬಿಜೆಪಿಯಿಂದ ಆಹ್ವಾನ ನಳಿನ್ ಕುಮಾರ್‌ರಿಂದ ನಡೆಯಿತಾ ಸೀಕ್ರೇಟ್ ಆಪರೇಷನ್ ಯಾರು ಪ್ರಭಾವಿ ಮುಖಂಡ..? ಇಲ್ಲಿದೆ ಡೀಟೇಲ್ಸ್   

ಮಂಗಳೂರು (ನ.16): ಕರಾವಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಬಿಜೆಪಿ ಸೇರಲು ಪರೋಕ್ಷವಾಗಿ ಆಹ್ವಾನ ನೀಡಲಾಗಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದಲೇ ಆಹ್ವಾನ ದೊರೆತಿದೆ.

ಕರ್ನಾಟಕ ರಾಜ್ಯ ಸಹಕಾರ ಒಕ್ಕೂಟದ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಸ್ತುತ ‌ಕಾಂಗ್ರೆಸ್ ಸದಸ್ಯರಾಗಿದ್ದು ಕರಾವಳಿ ಭಾಗದ ಪ್ರಭಾವೀ ಸಹಕಾರೀ ಧುರೀಣರಾಗಿಯೂ ರಾಜೇಂದ್ರ ಕುಮಾರ್ ಗುರುತಿಸಿಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಎಲೆಕ್ಷನ್, ಸಂಪುಟ ವಿಸ್ತರಣೆ ಬಗ್ಗೆ ಸಚಿವರ ಮಾತು....

ದಕ್ಷಿಣ ಕ‌ನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಭಾರೀ ವರ್ಚಸ್ಸು ಹೊಂದಿರುವ ನಾಯಕರಾಗಿದ್ದು, ಗ್ರಾ.ಪಂ ಚುನಾವಣೆ ಗುರಿಯಾಗಿಸಿ ರಾಜೇಂದ್ರ ‌ಕುಮಾರ್ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದೆ.

ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸುಳಿವು ನೀಡಿದ್ದಾರೆ. ರಾಜೇಂದ್ರ ಕುಮಾರ್ ರಾಷ್ಟ್ರ ಮಟ್ಟದ ನಾಯಕ ಆಗಬೇಕು. ಅವರು ನಮ್ಮ ಹತ್ತಿರ ಬಂದರೆ ಮಾತ್ರ ಎತ್ತರಕ್ಕೆ ಹೋಗುತ್ತಾರೆ ಎಂದಿದ್ದು ಅವರ ‌ಬಳಿ ವೈಯಕ್ತಿಕವಾಗಿ ಮಾತನಾಡಲು ಇದೆ, ಸಾರ್ವಜನಿಕವಾಗಿ ಬೇಡ ಎಂದು ಹೇಳಿದ್ದಾರೆ.

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!