ನಾನು ಸಚಿವನಾಗಲು ಅವರೇ ಕಾರಣ : ನಾರಾಯಣಗೌಡ

Kannadaprabha News   | Asianet News
Published : Oct 20, 2020, 10:01 AM IST
ನಾನು ಸಚಿವನಾಗಲು ಅವರೇ ಕಾರಣ :  ನಾರಾಯಣಗೌಡ

ಸಾರಾಂಶ

ನಾನು ಸಚಿವನಾಗಲು ಅವರೇ ಕಾರಣ ಎಂದು ಸಚಿವ ನಾರಾಯಣ ಗೌಡ ಹೇಳಿದ್ದಾರೆ. 

ಶಿವಮೊಗ್ಗ (ಅ.20): ಪೌರಾಡಳಿತ ಸಚಿವ ನಾರಾಯಣಗೌಡ ಅವರು ಮುಖ್ಯಮಂತ್ರಿ ಸಮ್ಮುಖದಲ್ಲೇ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಕೊಂಡಾದಿದ್ದಾರೆ. ತಾವು ಶಾಸಕ, ಸಚಿವನಾಗಿ ಆಯ್ಕೆಯಾಗಿ ಈ ಸ್ಥಾನದಲ್ಲಿ ನಿಲ್ಲಲು ವಿಜಯೇಂದ್ರ ಅವರೇ ಕಾರಣ ಎಂದು ಹೊಗಳಿದ್ದಾರೆ.

ಶಿಕಾರಿಪುರದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನಾನು ಈ ಸ್ಥಾನದಲ್ಲಿ ನಿಲ್ಲಲು ಬಿ.ವೈ. ವಿಜಯೇಂದ್ರ ಅವರೇ ಕಾರಣ. ಅವರ ಪರಿಶ್ರಮದಿಂದಾಗಿ ತಮಗೆ ಗೆಲವು ದೊರಕಿದೆ.

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆ...

ರಾಜ್ಯದ ಈ ಹಿಂದಿನ ಮುಖ್ಯಮಂತ್ರಿಗಳು ಕೆ.ಆರ್‌.ಪೇಟೆ ತಾಲೂಕು ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದರು. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟುಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

PREV
click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ