ಸ್ಥಳೀಯರೊಂದಿಗೆ ನಮಾಜ್‌ ಮಾಡಿದ ರಕ್ಷಣಾ ಸಿಬ್ಬಂದಿ

Published : Aug 13, 2019, 09:32 AM IST
ಸ್ಥಳೀಯರೊಂದಿಗೆ ನಮಾಜ್‌ ಮಾಡಿದ ರಕ್ಷಣಾ ಸಿಬ್ಬಂದಿ

ಸಾರಾಂಶ

ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆಗೆ ಆಗಮಿಸಿದ್ದ ಎನ್‌ಡಿಆರ್‌ಎಫ್‌, ಸೇನೆ, ಎಸ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯದೊಂದಿಗೆ ಸ್ಥಳೀಯರೊಂದಿಗೆ ಸೇರಿ ನಮಾಜ್ ಮಾಡಿ ಭಾವೈಕ್ಯತೆ ಮೆರೆದ ಘಟನೆ ನಡೆಯಿತು. 

ರಾಯಬಾಗ [ಆ.13]: ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆಗೆ ಆಗಮಿಸಿದ್ದ ಎನ್‌ಡಿಆರ್‌ಎಫ್‌, ಸೇನೆ, ಎಸ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ಪೊಲೀಸರು, ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

ಈ ಮೂಲಕ ಎಂಥದ್ದೇ ಕಷ್ಟದ ಸಂದರ್ಭದಲ್ಲೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಯಬಾಗ ತಾಲೂಕಿನ ಶಿರಗೂರ ಗ್ರಾಮದಲ್ಲಿ ಕೃಷ್ಣಾ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದ್ದ ಜನರನ್ನು ರಕ್ಷಣೆ ಮಾಡಲೆಂದು ರಕ್ಷಣಾ ಪಡೆ ಆಗಮಿಸಿತ್ತು. ಈ ವೇಳೆಯ ಕುಡಚಿ ಪಟ್ಟಣದ ಪಿ.ಎಂ.ತೋಟದ ಮಸೀದಿಯಲ್ಲಿ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಪ್ರಾರ್ಥನೆಯಲ್ಲಿ, ರಕ್ಷಣಾ ಸಿಬ್ಬಂದಿ ಪಾಲ್ಗೊಂಡರು.

PREV
click me!

Recommended Stories

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!
Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ