'ಸಂಪುಟದಲ್ಲಿ ಹೊಸಬರಿಗೂ ಅವಕಾಶ ಕೊಡಿ : ಸಚಿವ ಸ್ಥಾನಕ್ಕೆ ಡಿಮ್ಯಾಂ

Kannadaprabha News   | Asianet News
Published : Sep 30, 2020, 09:30 AM ISTUpdated : Sep 30, 2020, 09:46 AM IST
'ಸಂಪುಟದಲ್ಲಿ ಹೊಸಬರಿಗೂ ಅವಕಾಶ ಕೊಡಿ : ಸಚಿವ ಸ್ಥಾನಕ್ಕೆ ಡಿಮ್ಯಾಂ

ಸಾರಾಂಶ

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿವೆ. ಇದೇ ವೇಳೆ ಆಕಾಂಕ್ಷಿಗಳ ಸಮಖ್ಯೆಯೂ ಹೆಚ್ಚಾಗಿದೆ. ಅನೇಕ ಮುಖಂಡರು ಈಗಾಗಲೇ ಸಚಿವ ಸ್ಥಾನಕ್ಕಾಗಿ ಈಗಾಗಲೇ ಬೇಡಿಕೆ ಇಡುತ್ತಿದ್ದಾರೆ

ಹಾವೇರಿ (ಸೆ.30): ಸಚಿವ ಸಂಪುಟದಲ್ಲಿ ಕೆಲವರು ಕೆಲಸ ಮಾಡದವರಿದ್ದು, ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತು ಮಾತುಕತೆ ನಡೆಯುತ್ತಿವೆ.

 ಸಂಪುಟ ಪುನಾರಚನೆಯಾದರೆ ನಮಗೂ ಅವಕಾಶ ಸಿಗಬಹುದು. ಪರಿಶಿಷ್ಟಜಾತಿಯ ಬಲಗೈ ಸಮುದಾಯದಿಂದ ನಾನು ಮೂರು ಬಾರಿ ಆಯ್ಕೆಯಾಗಿದ್ದೇನೆ. ಆದ್ದರಿಂದ ನನಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾವಿದೆ ಎಂದಿ​ದ್ದಾರೆ.

ಶಿರಾಕ್ಕೆ ಕೈ ಅಭ್ಯರ್ಥಿ ಟಿಬಿಜೆ; ಬಿಜೆಪಿ, ದಳದಿಂದ ಯಾರು? ...
 
ಸಂಪುಟದಲ್ಲಿ ಬಹಳ ಜನ ಕೆಲಸ ಮಾಡದೆ ಇರುವವರು ಇದ್ದಾರೆ. ಇದು ಮುಖ್ಯಮಂತ್ರಿಗಳಿಗೆ, ಹೈಕಮಾಂಡ್‌, ಹಾಗೂ ರಾಜ್ಯಾಧ್ಯಕ್ಷರಿಗೂ ಗೊತ್ತಿದೆ. ಈ ನಿಟ್ಟಿನಲ್ಲಿ ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಮುಂದಿನ ಮೂರು ವರ್ಷ ಸರ್ಕಾರ ಸುಸೂತ್ರವಾಗಿ ನಡೆಸಲು ಅನುಕೂಲವಾಗುತ್ತದೆ ಎಂದರು.

PREV
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಬೆಂಗಳೂರಿನ ಗುಲಾಬಿ ಮೆಟ್ರೋ ಮಾರ್ಗಕ್ಕೆ ಶೀಘ್ರ ಪ್ರೊಟೊಟೈಪ್‌ ರೈಲು