ಕಿ.ಮೀ ದೂರ ನಡೆದೇ ಸಾಗಿದ ನಿಖಿಲ್ : ಬಿರುಸುಗೊಂಡ ಚಟುವಟಿಕೆ

Kannadaprabha News   | Asianet News
Published : Nov 11, 2020, 07:04 AM IST
ಕಿ.ಮೀ ದೂರ ನಡೆದೇ ಸಾಗಿದ ನಿಖಿಲ್ : ಬಿರುಸುಗೊಂಡ ಚಟುವಟಿಕೆ

ಸಾರಾಂಶ

ನಿಖಿಲ್ ಕುಮಾರಸ್ವಾಮಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ನಡೆದುಕೊಂಡೇ ಹೋಗಿದ್ದಾರೆ

ಕನಕಪುರ (ನ.11):  ತಾಲೂಕಿನ ಮರಳವಾಡಿ ಹೋಬಳಿಯ ವಿವಿಧ ಹಳ್ಳಿಗಳಿಗೆ ಜೆಡಿಎಸ್‌ ಯುವ ಘಟಕದ ರಾಜ್ಯಾ​ಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ​ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರದ ಭರವಸೆ ನೀಡಿದರು.

ಶಿವನಹಳ್ಳಿದೊಡ್ಡಿ ಗ್ರಾಮದಲ್ಲಿ ಅರ್ಧಕ್ಕೆ ನಿಂತಿ​ರುವ ಸೇತುವೆ ಕಾಮ​ಗಾರಿ ವೀಕ್ಷಿಸಿದ ನಿಖಿಲ್‌ ಅವ​ರು, ಆದಷ್ಟುಬೇಗ ಸೇತುವೆ ನಿರ್ಮಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿ​ಕೊ​ಡು​ವು​ದಾಗಿ ತಿಳಿ​ಸಿ​ದರು.

 ಸೇತುವೆ ಬಳಿ ಭೇಟಿ ನೀಡಿದ ನಿಖಿಲ್ ಅವರನ್ನು ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಬೇಕೆಂದು ಪಟ್ಟುಹಿಡಿದು ನಾವು ದಿನನಿತ್ಯ ಪಡುವ ಕಷ್ಟವನ್ನು ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು.

ಜನರ ಮನವಿಗೆ ಸ್ಪಂದಿಸಿದ ನಿಖಿಲ್ ಹಳ್ಳವನ್ನು ದಾಟಿ ಸುಮಾರು 1 ಕಿ.ಮೀ. ನಡೆದುಕೊಂಡು ಹೋಗಿ ಗ್ರಾಮದ ಜನರ ಸಮಸ್ಯೆ ಆಲಿಸಿ ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

PREV
click me!

Recommended Stories

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ಪಲ್ಟಿ ಹೊಡೆದ ಎಳನೀರು ವಾಹನ, ಭೀಕರ ದೃಶ್ಯ ಸೆರೆ
ಪೂಜೆಗೆ ಮಚ್ಚೆ ಇಲ್ಲದ ನಗ್ನ ಫೋಟೋ ಕಳ್ಸು ₹30 ಲಕ್ಷ ಕೊಡ್ತೇನೆ, ರಾಮನಗರದಲ್ಲಿ ಮಹಿಳೆಗೆ ಕಿರುಕುಳ