ನಿಖಿಲ್‌ ಕುಮಾರಸ್ವಾಮಿಗೆ ಹೊಸ ಜವಾಬ್ದಾರಿ : ಹೆಚ್ಚಾಗುತ್ತಿದೆ ಹೊಣೆಗಾರಿಕೆ

Kannadaprabha News   | Asianet News
Published : Dec 10, 2020, 07:37 AM IST
ನಿಖಿಲ್‌ ಕುಮಾರಸ್ವಾಮಿಗೆ ಹೊಸ ಜವಾಬ್ದಾರಿ :  ಹೆಚ್ಚಾಗುತ್ತಿದೆ ಹೊಣೆಗಾರಿಕೆ

ಸಾರಾಂಶ

ನಿಖಿಲ್ ಕುಮಾರಸ್ವಾಮಿಗೆ ಇದೀಗ ಹೊಸ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. 

ಕೋಲಾರ (ಡಿ.10): ಮುಂದಿನ ದಿನಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆಯನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ವಹಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. 

ನಗರ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಪಂ ಚುನಾವಣೆ ಸಂಬಂಧ ಬುಧವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಈ ವಿಚಾರ ತಿಳಿಸಿದರು. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಗೆ ಈ ಭಾಗದಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗುವುದು. 

' ಸೋತಿರುವ ನಿಖಿಲ್‌ಗೆ ಮಂಡ್ಯದಿಂದಲೇ ಭರ್ಜರಿ ಗೆಲುವು' ..

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಬಹುಮತ ಪಡೆಯುವುದು ನನ್ನ ಕೊನೇ ಆಸೆ. ಈ ನಿಟ್ಟಿನಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆಯಬೇಕು. ಇಡೀ ದೇಶದಲ್ಲಿ ಇನ್ಮುಂದೆ ಕಾಂಗ್ರೆಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದಿಲ್ಲ. ನಮಗೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಬಹುಮತ ಸಿಕ್ಕರೆ ರಾಜ್ಯದಲ್ಲಿ ಸಾಕಷ್ಟುಬದಲಾವಣೆ ಆಗಲಿದೆ ಎಂದರು ತಿಳಿಸಿದರು.

PREV
click me!

Recommended Stories

Karunya Ram Sister Case: ಒಡಹುಟ್ಟಿದ ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್
ಮುಂದಿನ ಚುನಾವಣೆಗೆ ನಾನು ನಿಲ್ಲದಿದ್ದರೂ ಸರಿ, ಆರ್.ಅಶೋಕ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಸೋಲಿಸಿಯೇ ಸಿದ್ಧ!