ಈದ್ ಪ್ರಾರ್ಥನೆ, ಗುಂಪು, ಸಂಭ್ರಮಕ್ಕೆ ಅವಕಾಶ ಇಲ್ಲ; ಕಮಲ್ ಕಟ್ಟುನಿಟ್ಟು

Published : May 13, 2021, 10:39 PM IST
ಈದ್ ಪ್ರಾರ್ಥನೆ, ಗುಂಪು, ಸಂಭ್ರಮಕ್ಕೆ ಅವಕಾಶ ಇಲ್ಲ; ಕಮಲ್ ಕಟ್ಟುನಿಟ್ಟು

ಸಾರಾಂಶ

* ರಂಜಾನ್ ಹಬ್ಬ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ * ಎಲ್ಲರೂ ಲಾಕ್ ಡೌನ್ ರೂಲ್ಸ್  ಎಲ್ಲರೂ ಫಾಲೋ ಮಾಡಲೇಬೇಕು * ಹಬ್ಬವೆಂದು ಮನೆಯಿಂದ ಹೊರ ಬರುವಂತಿಲ್ಲ, ಗುಂಪು ಸೇರುವಂತಿಲ್ಲ  * ಈಗಾಗಲೇ ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಿರುವ ಕಮಿಷನರ್ ಕಮಲ್ ಪಂತ್

ಬೆಂಗಳೂರು (ಮೇ 13)  ರಂಜಾನ್ ಆಚರಣೆಗೂ ಮುನ್ನ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದು ಅನೇಕ ವಿಚಾರಗಳನ್ನು ಸ್ಪಷ್ಟಮಾಡಿದ್ದಾರೆ.

ರಂಜಾನ್​ ತಿಂಗಳ ಉಪವಾಸದ ಕೊನೆಯ ದಿನದ ಹಬ್ಬ ಈದ್​ ಉಲ್​ ಫಿತರ್​ ಆಚರಣೆಗೆ ಈಗಾಗಲೇ ಸಿದ್ದತೆ ನಡೆಸಿದೆ.  ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುವುದು ಸಂಪ್ರದಾಯವಾಗಿತ್ತು.

ಆದರೆ ಈ ಬಾರಿ ಕೋವಿಡ್​ ಆತಂಕ ಎದುರಾಗಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಈ ಹಿನ್ನಲೆ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸುವಂತೆ ಕೋರಲಾಗಿದೆ. 

ಈ ಲಸಿಕೆ ಎಲ್ಲದಕ್ಕಿಂತ ಪರಿಣಾಮಕಾರಿ ಎಂದ ಸುಧಾಕರ್

ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದ್ದು, ಮನೆಯಲ್ಲಿಯೇ ನಮಾಜ್ ಮಾಡಬಹುದು.  ನಿಯಮ ಜಾರಿಯಲ್ಲಿರುವುದರಿಂದ ಯಾರು ಮನೆಯಿಂದ ಹೊರ ಬರುವಂತಿಲ್ಲ. ಗುಂಪು ಸೇರುವಂತಿಲ್ಲ ಎಂದು ಪಂತ್ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಲಾಗಿದೆ.   ಬೆಂಗಳೂರಿನಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದು,  ಗುಂಪು ಸೇರುವಂತಿಲ್ಲ.  ಅಗತ್ಯ ಮುನ್ನೆಚ್ಚರಿಕೆವಹಿಸಬೇಕು. ಕೊರೋನಾ ನಿಯಮಗಳ ಪಾಲನೆ ಅಗತ್ಯ ಎಂದು ತಿಳಿಸಿದ್ದಾರೆ. 

 

 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!